23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ : ಉತ್ತಮ ಶಿಕ್ಷಕರ ಆಯ್ಕೆ ವಿಚಾರದಲ್ಲಿ ಸರಕಾರಕ್ಕೆ ಎಸ್‍ಡಿಪಿಐನವರು ದೂರು ಕೊಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಉಡುಪಿ ಜಿಲ್ಲೆಯ ಕುಂದಾಪುರದ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರನ್ನು ಸರಕಾರದ ಅಧಿಕೃತ ಸಮಿತಿ ಆಯ್ಕೆ ಮಾಡಿ ಉತ್ತಮ ಶಿಕ್ಷಕ ಹೆಸರು ಪ್ರಕಟಿಸಿ ನಂತರ ತಡೆ ಹಿಡಿದದ್ದು ಎಷ್ಟು ಸರಿ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಯಾರನ್ನೋ ಓಲೈಕೆ ಮಾಡುವ ಕಾರಣಕ್ಕೆ ಪ್ರಶಸ್ತಿ ತಡೆಹಿಡಿಯುವ ಕ್ರಮ ಕೈಗೊಂಡಿದ್ದು ಸರಿಯಲ್ಲ. ಇದು ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ. ಹನುಮಾನ್ ಚಾಲೀಸಾ ವಿಚಾರದಲ್ಲೂ ಸರಕಾರ ಇದೇ ರೀತಿ ನಡಕೊಂಡಿತ್ತು. ಈ ರೀತಿಯ ನಡವಳಿಕೆ ಸಮಾಜದಲ್ಲಿ ಶಾಂತಿ ಕದಡುವ ವಾತಾವರಣ ಸೃಷ್ಟಿ ಮಾಡುತ್ತದೆ. ಗಣೇಶೋತ್ಸವ ಪ್ರಸಾದ ವಿತರಣೆ ಬಗ್ಗೆ ವಿಪರೀತ ನಿಯಮ ಮಾಡಿದ್ದೀರಿ. ಸರಕಾರ ಮಾಡುತ್ತಿರುವ ತಾರತಮ್ಯ ತುಷ್ಟಿಕರಣಕ್ಕೆ ಸಂವಿಧಾನ ಅನ್ವಯ ಆಗುದಿಲ್ಲವೇ?


ಇಂಥದ್ದಲ್ಲೆವನ್ನು ಮಾಡುತ್ತಿದ್ದರೆ ಈ ರಾಜ್ಯವನ್ನು ಕಾಪಾಡುವವರು ಯಾರು? ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಅಧಿಕಾರದ ಮದ ಏರಿದೆ. ಸಾಂವಿಧಾನಿಕ ವ್ಯವಸ್ಥೆ ಬಿಟ್ಟು ಏನೇ ಮಾಡಿದರೂ ಕೂಡ ಶಾಂತಿ ಕದಡುವ ವಾತಾವರಣ ಸೃಷ್ಟಿ ಆಗುತ್ತದೆ. ಅಂಥ ಕೆಲಸ ಮಾಡದಿರಿ. ತಪ್ಪುಗಳನ್ನು ಸರಿಪಡಿಸದೆ ಇದೇ ರೀತಿ ಮುಂದುವರಿದರೆ ಹೋರಾಟ ಅನಿವಾರ್ಯ ಎಂದು ನಾಯಕ್ ಅವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

Related posts

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ತುಳುಕೂಟ ಇಸ್ರೇಲ್ ವತಿಯಿಂದ ಮಂಜುಶ್ರೀ ಸೀನಿಯರ್ ಛೇಂಬರ್ ಬೆಳ್ತಂಗಡಿ ಆಶ್ರಯದಲ್ಲಿ ಕಿಲ್ಲೂರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya
error: Content is protected !!