25.8 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಇವರ ನಿರ್ದೇಶನದಂತೆ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಸರಕಾರೀ ಪದವಿ ಪೂರ್ವ ಕಾಲೇಜು ನಡ ಇಲ್ಲಿ ನಡೆಯಿತು.

ಉದ್ಘಾಟನಾ ಸಮಾರಂಭದಲ್ಲಿ ಡಾll ಪ್ರದೀಪ್ ಕುಮಾರ್ ಅವರು ಮಾತನಾಡುತ್ತಾ “ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಸಮಚಿತ್ತದಿಂದ ಆಟವಾಡಬೇಕು.”ಎಂದು ಕಗ್ಗದ ಉಕ್ತಿಯೊಂದನ್ನು ವಿವರಿಸುತ್ತಾ ತಿಳಿಸಿದರು. ನಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ದಿವಾಕರ ಪೂಜಾರಿ ಇವರು ಅಧ್ಯಕ್ಷತೆ ವಹಿಸಿದ್ದರು.

ಮೋಹನ್ ಗೌಡ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಚಂದ್ರಶೇಖರ್ ಸ್ವಾಗತಿಸಿ ಶ್ರೀಮತಿ ಲಿಲ್ಲಿ ಪಿ.ವಿ. ವಂದಿಸಿದರು. ಸಮಾರೋಪ ಸಮಾರಂಭದಲ್ಲಿ ಅಜಿತ್ ಆರಿಗ ಇವರು ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ಶಿಲ್ಪಾ ಡಿ. ಸ್ವಾಗತಿಸಿ ಶ್ರೀಮತಿ ವಸಂತಿ ಪಿ. ನಿರೂಪಿಸಿ, ವಂದಿಸಿದರು.


ಬಾಲಕರ ವಿಭಾಗದಲ್ಲಿ ಎಸ್.ಡಿ.ಯಂ. ಪದವಿ ಪೂರ್ವ ಕಾಲೇಜು, ಉಜಿರೆ ಪ್ರಥಮ ಸ್ಥಾನವನ್ನು, ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ದ್ವಿತೀಯ ಸ್ಥಾನವನ್ನು ಪಡೆಯಿತು.


ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು, ಎಸ್. ಡಿ.ಯಂ. ಪದವಿ ಪೂರ್ವ ಕಾಲೇಜು, ಉಜಿರೆ ದ್ವಿತೀಯ ಸ್ಥಾನವನ್ನು ಪಡೆಯಿತು.

Related posts

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ವತಿಯಿಂದ ‘ರಾಷ್ಟ್ರ ಮೊದಲು’ ತಿರಂಗಾ ಯಾತ್ರೆ

Suddi Udaya

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya
error: Content is protected !!