July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಇವರ ನಿರ್ದೇಶನದಂತೆ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಸರಕಾರೀ ಪದವಿ ಪೂರ್ವ ಕಾಲೇಜು ನಡ ಇಲ್ಲಿ ನಡೆಯಿತು.

ಉದ್ಘಾಟನಾ ಸಮಾರಂಭದಲ್ಲಿ ಡಾll ಪ್ರದೀಪ್ ಕುಮಾರ್ ಅವರು ಮಾತನಾಡುತ್ತಾ “ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಸಮಚಿತ್ತದಿಂದ ಆಟವಾಡಬೇಕು.”ಎಂದು ಕಗ್ಗದ ಉಕ್ತಿಯೊಂದನ್ನು ವಿವರಿಸುತ್ತಾ ತಿಳಿಸಿದರು. ನಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ದಿವಾಕರ ಪೂಜಾರಿ ಇವರು ಅಧ್ಯಕ್ಷತೆ ವಹಿಸಿದ್ದರು.

ಮೋಹನ್ ಗೌಡ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಚಂದ್ರಶೇಖರ್ ಸ್ವಾಗತಿಸಿ ಶ್ರೀಮತಿ ಲಿಲ್ಲಿ ಪಿ.ವಿ. ವಂದಿಸಿದರು. ಸಮಾರೋಪ ಸಮಾರಂಭದಲ್ಲಿ ಅಜಿತ್ ಆರಿಗ ಇವರು ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ಶಿಲ್ಪಾ ಡಿ. ಸ್ವಾಗತಿಸಿ ಶ್ರೀಮತಿ ವಸಂತಿ ಪಿ. ನಿರೂಪಿಸಿ, ವಂದಿಸಿದರು.


ಬಾಲಕರ ವಿಭಾಗದಲ್ಲಿ ಎಸ್.ಡಿ.ಯಂ. ಪದವಿ ಪೂರ್ವ ಕಾಲೇಜು, ಉಜಿರೆ ಪ್ರಥಮ ಸ್ಥಾನವನ್ನು, ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ದ್ವಿತೀಯ ಸ್ಥಾನವನ್ನು ಪಡೆಯಿತು.


ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು, ಎಸ್. ಡಿ.ಯಂ. ಪದವಿ ಪೂರ್ವ ಕಾಲೇಜು, ಉಜಿರೆ ದ್ವಿತೀಯ ಸ್ಥಾನವನ್ನು ಪಡೆಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya
error: Content is protected !!