22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

ಪುದುವೆಟ್ಟು ಗ್ರಾಮದ ನಡ್ಯೇಲು ಎಂಬಲ್ಲಿ ಕಳೆದ ನಾಲ್ಕು ದಿನಗಳಿಂದ ಕಾಡಾನೆಯು ಓಡಾಡುತ್ತಿದ್ದು ಸೆ.5 ರಂದು ರಾತ್ರಿ ಕಾಡಾನೆಯು ಗದ್ದೆಗಳಿಗೆ ಹಾಗೂ ತೋಟಗಳಿಗೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ.

ಕಳೆದ ನಾಲ್ಕು ದಿನಗಳಿಂದ ಕಾಡಾನೆಯು ಪರಿಸರದಲ್ಲಿ ಓಡಾಡುತ್ತಿದ್ದು ಅಪಾರ ಕೃಷಿ ಹಾನಿ ಮಾಡಿದೆ. ನಡ್ಯೇಲು ನಾರಾಯಣ ಗೌಡ ರವರ ಗದ್ದೆಗೆ ನುಗ್ಗಿ ಭತ್ತದ ಗಿಡ, ತೆಂಗಿನ ಗಿಡಗಳು ಹಾಗೂ ಸುಂದರ ಗೌಡರವರ ತೋಟಕ್ಕೆ ನುಗ್ಗಿ ಬಾಳೆ ಗಿಡ, ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ.

ಸ್ಥಳಕ್ಕೆ ಪುದುವೆಟ್ಟು ಗ್ರಾ.ಪಂ ಅಧ್ಯಕ್ಷೆ ಅನಿತಾ, ಅರಣ್ಯ ಅಧಿಕಾರಿ ರವಿಚಂದ್ರನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅರಣ್ಯಾಧಿಕಾರಿ, ಇಂದು(ಸೆ.6) ರಾತ್ರಿ ನಾಲ್ವರು ಅರಣ್ಯ ಅಧಿಕಾರಿಗಳು, ಹಾಗೂ ಊರಿನ ಗ್ರಾಮಸ್ಥರು ಸೇರಿ ಆನೆಯನ್ನು ಕಾಡಿಗೆ ಬೆನ್ನಟ್ಟುವ ಬಗ್ಗೆ ತಿಳಿಸಿದರು.

Related posts

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya
error: Content is protected !!