ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಬಳಂಜ: ಯಕ್ಷಪ್ರಿಯ ಸಮಿತಿ ನಾಲ್ಕೂರು, ಬಳಂಜ ಇದರ ನೇತೃತ್ವದಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆಪ್ಟೆಂಬರ್ 7 ಮತ್ತು 8ರಂದು ನಾಲ್ಕೂರು ನಿಟ್ಟಡ್ಕ ಮೈದಾನದಲ್ಲಿ ನಡೆಯಲಿದ್ದು ಈಗಾಗಲೇ ಇದರ ಸ್ಥಾಪಕ ಅಧ್ಯಕ್ಷ ಸಂಜೀವ ಶೆಟ್ಟಿ ಖಂಡಿಗ ಇವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ.

ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.

ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನಿಲ್ ಶೆಟ್ಟಿ, ಕೋಶಾಧಿಕಾರಿ ರವೀಂದ್ರ ಬಿ.ಅಮೀನ್ ಹಾಗೂ ಸಮಿತಿಯ ಎಲ್ಲಾ ಸದಸ್ಯರ ಸಹಕಾರದಲ್ಲಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.

Leave a Comment

error: Content is protected !!