24.3 C
ಪುತ್ತೂರು, ಬೆಳ್ತಂಗಡಿ
May 20, 2025
ಧಾರ್ಮಿಕ

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು -ನಾವೂರು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ:ನಾವೂರು ಪೇಟೆಯಿಂದ ಇಂದಬೆಟ್ಟು ದೇವಸ್ಥಾನಕ್ಕೆ ಭಜನೆ ಮೂಲಕ ಶ್ರೀ ಮಹಾಗಣಪತಿ ದೇವರ ಮೂರ್ತಿಯ ವೈಭವದ ಮೆರವಣಿಗೆ

ನಾವೂರು : ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು -ನಾವೂರು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವು ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ಸೆ. 7 ಹಾಗೂ ಸೆ. 8ರಂದು ಜರುಗಲಿದೆ.

ಸೆ. 7ರಂದು ನಾವೂರು ಪೇಟೆಯಿಂದ ಇಂದಬೆಟ್ಟು ದೇವಸ್ಥಾನಕ್ಕೆ ಭಜನೆ ಮೂಲಕ ಶ್ರೀ ಮಹಾಗಣಪತಿ ದೇವರ ಮೂರ್ತಿಯ ಮೆರವಣಿಗೆ ನಡೆಯಿತು.

ಉತ್ಸವದ ಉದ್ಘಾಟನೆಯನ್ನು ಬೆಳ್ತಂಗಡಿಯ ಉದ್ಯಮಿ ರಾಗ್ನೇಶ್ ಸಾಲಿಯಾನ್ ನೆರವೇರಿಸಿದರು.

ನಂತರ ನಡೆದ ಸಭೆಯ ಅಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರೊ. ಸುಮಂತ್ ಕುಮಾರ್ ಜೈನ್ ಬೆಳ್ಳೂರುಗುತ್ತು ವಹಿಸಿದ್ದರು. ವೇದಿಕೆಯಲ್ಲಿ ಉದ್ಯಮಿ ರಾಗ್ನೇಶ್ ಸಾಲಿಯಾನ್, ಸಮಿತಿ ಗೌರವಾಧ್ಯಕ್ಷ ಡಾ. ಪ್ರದೀಪ್ ಎ. ನಾವೂರು, ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷ ಹರೀಶ್ ಸಾಲಿಯನ್, ಇಂದಬೆಟ್ಟು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸಂಜೀವ ಗೌಡ ಮನ್ನಡ್ಕ, ನಾವೂರು ವಿ. ಹಿಂ. ಪರಿಷತ್ ಅಧ್ಯಕ್ಷ ವಿಜಯ ಹೊಡಿಕ್ಕಾರು ಉಪಸ್ಥಿತರಿದ್ದರು.

ಸಮಿತಿ ಪ್ರ. ಕಾರ್ಯದರ್ಶಿ ಗಣೇಶ್ ಗೌಡ ನೆಲ್ಲಿಪಲ್ಕೆ ನಾವೂರು ಸ್ವಾಗತಿಸಿದರು. ವಿನೋದ್ ಕಲ್ಲಾಜೆ ಧನ್ಯವಾದವಿತ್ತರು. ಸತೀಶ್ ಮನ್ನಡ್ಕ ಕಾರ್ಯಕ್ರಮ ನಿರೂಪಿಸಿದರು.

ಗೋವಿಗಾಗಿ ನಿಧಿ ಸಂಗ್ರಹಣೆಗೆ ಚಾಲನೆ:
ಇದೇ ಸಂಧರ್ಭ ಕಳೆಂಜ ನಂದಗೋಕುಲ ಗೋಶಾಲೆಗೆ ಗೋವಿಗಾಗಿ ನಿಧಿ ಸಂಗ್ರಹಣೆಗೆ ಚಾಲನೆ ನೀಡಲಾಯಿತು.

Related posts

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya
error: Content is protected !!