ಲಾಯಿಲ: 36ನೇ ವರ್ಷದ ಶ್ರೀ ಗಣೇಶೋತ್ಸವ ಉದ್ಘಾಟನೆ

Suddi Udaya

ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಬಲಮುರಿ ಕ್ಷೇತ್ರ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ ಸೆ.9ರವರೆಗೆ ಲಾಯಿಲ ವಿಶ್ವೇಶ್ವರ ಕಲಾಮಂದಿರದಲ್ಲಿ ನಡೆಯಲಿದೆ.

ಸೆ.7ರಂದು ಬೆಳಿಗ್ಗೆ 108 ಕಾಯಿ ಗಣಪತಿ ಹವನ, 9ಗಂಟೆಗೆ ಮೂರ್ತಿ ಪ್ರತಿಷ್ಠೆ ನಡೆಯಿತು.
ವಿಧಾನ ಪರಿಷತ್ ಮಾಜಿ ಶಾಸಕರಾದ ಕೆ ಹರೀಶ್ ಕುಮಾರ್
ಉತ್ಸವ ವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಗಳಾದ ಅಜಿತ್ ಕುಮಾರ್ ಇಂದಬೆಟ್ಟು. ರಾಜೇಶ್ ಪ್ರಭು ಬೆಳ್ತಂಗಡಿ. ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ರಮೇಶ್. ಉಪಸ್ಥಿದ್ದರು. ಕಾರ್ಯಕ್ರಮವನ್ನು ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ ನಿರೂಪಿಸಿ. ಕಾರ್ಯದರ್ಶಿ ಅರವಿಂದ ಕುಮಾರ್ ಸ್ವಾಗತಿಸಿ. ಅಭಿನಂದನ ಧನ್ಯವಾದವಿತರು.

ಪೂರ್ಣಾಹುತಿ, ಸಂಜೆ 5 ರಿಂದ ಶ್ರೀ ಶಾರದಾ ಅಂಧರ ಗೀತಗಾಯನ ಕಲಾ ಸಂಘ ಮಂಗಳೂರು ಇವರಿಂದ

ಜನಪದ ಗೀತೆ ಹಾಗೂ ಭಕ್ತಿರಸಮಂಜರಿ ಕಾರ್ಯಕ್ರಮ ನಡೆಯಲಿದೆ., ರಾತ್ರಿ8ರಿಂದ ಕರ್ನೋಡಿ ಮತ್ತು ಪಡ್ಲಾಡಿ ಶಾಲಾ

ವಿದ್ಯಾರ್ಥಿಗಳಿಂದ ನೃತ್ಯ .ಕಾರ್ಯಕ್ರಮ, ನಡೆಯಲಿದೆ ಸೆ.8ರಂದು

ಸಂಜೆ 6ರಿಂದ ಸಾಧನಾ ಕಲಾ ತಂಡ ಲಾಯಿಲ

ಇವರಿಂದ “ಶ್ರೀ ಕೃಷ್ಣ ಪಾರಿಜಾತ ನರಕಾಸುರ ಮೋಕ್ಷ”

ಯಕ್ಷಗಾನ, ರಾತ್ರಿ 9ರಿಂದ ಓಂ ಶಕ್ತಿ ಗೆಳೆಯರ ಬಳಗ

ಲಾಯಿಲ ಇವರ ವತಿಯಿಂದ “ಬೈರಾಸ್ ಭಾಸ್ಕರೆ”

ತುಳು ಹಾಸ್ಯಮಯ ನಾಟಕ ನಡೆಯಲಿದೆ.

Leave a Comment

error: Content is protected !!