July 23, 2026
ಧಾರ್ಮಿಕ

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು -ನಾವೂರು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ:ನಾವೂರು ಪೇಟೆಯಿಂದ ಇಂದಬೆಟ್ಟು ದೇವಸ್ಥಾನಕ್ಕೆ ಭಜನೆ ಮೂಲಕ ಶ್ರೀ ಮಹಾಗಣಪತಿ ದೇವರ ಮೂರ್ತಿಯ ವೈಭವದ ಮೆರವಣಿಗೆ

ನಾವೂರು : ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು -ನಾವೂರು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವು ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ಸೆ. 7 ಹಾಗೂ ಸೆ. 8ರಂದು ಜರುಗಲಿದೆ.

ಸೆ. 7ರಂದು ನಾವೂರು ಪೇಟೆಯಿಂದ ಇಂದಬೆಟ್ಟು ದೇವಸ್ಥಾನಕ್ಕೆ ಭಜನೆ ಮೂಲಕ ಶ್ರೀ ಮಹಾಗಣಪತಿ ದೇವರ ಮೂರ್ತಿಯ ಮೆರವಣಿಗೆ ನಡೆಯಿತು.

ಉತ್ಸವದ ಉದ್ಘಾಟನೆಯನ್ನು ಬೆಳ್ತಂಗಡಿಯ ಉದ್ಯಮಿ ರಾಗ್ನೇಶ್ ಸಾಲಿಯಾನ್ ನೆರವೇರಿಸಿದರು.

ನಂತರ ನಡೆದ ಸಭೆಯ ಅಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರೊ. ಸುಮಂತ್ ಕುಮಾರ್ ಜೈನ್ ಬೆಳ್ಳೂರುಗುತ್ತು ವಹಿಸಿದ್ದರು. ವೇದಿಕೆಯಲ್ಲಿ ಉದ್ಯಮಿ ರಾಗ್ನೇಶ್ ಸಾಲಿಯಾನ್, ಸಮಿತಿ ಗೌರವಾಧ್ಯಕ್ಷ ಡಾ. ಪ್ರದೀಪ್ ಎ. ನಾವೂರು, ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷ ಹರೀಶ್ ಸಾಲಿಯನ್, ಇಂದಬೆಟ್ಟು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸಂಜೀವ ಗೌಡ ಮನ್ನಡ್ಕ, ನಾವೂರು ವಿ. ಹಿಂ. ಪರಿಷತ್ ಅಧ್ಯಕ್ಷ ವಿಜಯ ಹೊಡಿಕ್ಕಾರು ಉಪಸ್ಥಿತರಿದ್ದರು.

ಸಮಿತಿ ಪ್ರ. ಕಾರ್ಯದರ್ಶಿ ಗಣೇಶ್ ಗೌಡ ನೆಲ್ಲಿಪಲ್ಕೆ ನಾವೂರು ಸ್ವಾಗತಿಸಿದರು. ವಿನೋದ್ ಕಲ್ಲಾಜೆ ಧನ್ಯವಾದವಿತ್ತರು. ಸತೀಶ್ ಮನ್ನಡ್ಕ ಕಾರ್ಯಕ್ರಮ ನಿರೂಪಿಸಿದರು.

ಗೋವಿಗಾಗಿ ನಿಧಿ ಸಂಗ್ರಹಣೆಗೆ ಚಾಲನೆ:
ಇದೇ ಸಂಧರ್ಭ ಕಳೆಂಜ ನಂದಗೋಕುಲ ಗೋಶಾಲೆಗೆ ಗೋವಿಗಾಗಿ ನಿಧಿ ಸಂಗ್ರಹಣೆಗೆ ಚಾಲನೆ ನೀಡಲಾಯಿತು.

Related posts

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!