July 23, 2026
ಧಾರ್ಮಿಕ

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು -ನಾವೂರು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ:ನಾವೂರು ಪೇಟೆಯಿಂದ ಇಂದಬೆಟ್ಟು ದೇವಸ್ಥಾನಕ್ಕೆ ಭಜನೆ ಮೂಲಕ ಶ್ರೀ ಮಹಾಗಣಪತಿ ದೇವರ ಮೂರ್ತಿಯ ವೈಭವದ ಮೆರವಣಿಗೆ

ನಾವೂರು : ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು -ನಾವೂರು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವು ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ಸೆ. 7 ಹಾಗೂ ಸೆ. 8ರಂದು ಜರುಗಲಿದೆ.

ಸೆ. 7ರಂದು ನಾವೂರು ಪೇಟೆಯಿಂದ ಇಂದಬೆಟ್ಟು ದೇವಸ್ಥಾನಕ್ಕೆ ಭಜನೆ ಮೂಲಕ ಶ್ರೀ ಮಹಾಗಣಪತಿ ದೇವರ ಮೂರ್ತಿಯ ಮೆರವಣಿಗೆ ನಡೆಯಿತು.

ಉತ್ಸವದ ಉದ್ಘಾಟನೆಯನ್ನು ಬೆಳ್ತಂಗಡಿಯ ಉದ್ಯಮಿ ರಾಗ್ನೇಶ್ ಸಾಲಿಯಾನ್ ನೆರವೇರಿಸಿದರು.

ನಂತರ ನಡೆದ ಸಭೆಯ ಅಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರೊ. ಸುಮಂತ್ ಕುಮಾರ್ ಜೈನ್ ಬೆಳ್ಳೂರುಗುತ್ತು ವಹಿಸಿದ್ದರು. ವೇದಿಕೆಯಲ್ಲಿ ಉದ್ಯಮಿ ರಾಗ್ನೇಶ್ ಸಾಲಿಯಾನ್, ಸಮಿತಿ ಗೌರವಾಧ್ಯಕ್ಷ ಡಾ. ಪ್ರದೀಪ್ ಎ. ನಾವೂರು, ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷ ಹರೀಶ್ ಸಾಲಿಯನ್, ಇಂದಬೆಟ್ಟು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸಂಜೀವ ಗೌಡ ಮನ್ನಡ್ಕ, ನಾವೂರು ವಿ. ಹಿಂ. ಪರಿಷತ್ ಅಧ್ಯಕ್ಷ ವಿಜಯ ಹೊಡಿಕ್ಕಾರು ಉಪಸ್ಥಿತರಿದ್ದರು.

ಸಮಿತಿ ಪ್ರ. ಕಾರ್ಯದರ್ಶಿ ಗಣೇಶ್ ಗೌಡ ನೆಲ್ಲಿಪಲ್ಕೆ ನಾವೂರು ಸ್ವಾಗತಿಸಿದರು. ವಿನೋದ್ ಕಲ್ಲಾಜೆ ಧನ್ಯವಾದವಿತ್ತರು. ಸತೀಶ್ ಮನ್ನಡ್ಕ ಕಾರ್ಯಕ್ರಮ ನಿರೂಪಿಸಿದರು.

ಗೋವಿಗಾಗಿ ನಿಧಿ ಸಂಗ್ರಹಣೆಗೆ ಚಾಲನೆ:
ಇದೇ ಸಂಧರ್ಭ ಕಳೆಂಜ ನಂದಗೋಕುಲ ಗೋಶಾಲೆಗೆ ಗೋವಿಗಾಗಿ ನಿಧಿ ಸಂಗ್ರಹಣೆಗೆ ಚಾಲನೆ ನೀಡಲಾಯಿತು.

Related posts

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

Suddi Udaya

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya

ನಾವೂರುನಲ್ಲಿ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ: ಪಂದಳರಾಜ ಶಶಿಕುಮಾರ ವರ್ಮ ದಂಪತಿ ಭಾಗಿ

Suddi Udaya

ಎ.14: ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನ ದೈವ/ದೇವರ ವೀಡಿಯೋ ಮತ್ತು ಆಡಿಯೋ ಆಲ್ಬಮ್‌ ಸಾಂಗ್ ಬಿಡುಗಡೆ

Suddi Udaya
error: Content is protected !!