25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ವಿಶ್ವಹಿಂದೂ ಪರಿಷದ್ ಇಂದಬೆಟ್ಟು-ನಾವೂರು, ಸಾರ್ವಜನಿಕ ಗಣೇಶೋತ್ಸವ ಸಮಿವಿಇದರ ವತಿಯಿಂದ 25ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ : 25ನೇ ವಷ೯ದ ಅಧ್ಯಕ್ಷ ಸೇರಿದಂತೆ 24 ಮಂದಿ ಮಾಜಿ ಅಧ್ಯಕ್ಷರುಗಳಿಗೆ ಸಮಿತಿಯಿಂದ ಗೌರವಾ೯ಣೆ

ಹಿಂದೂ ಧಾರ್ಮಿಕ ಉತ್ಸವಗಳ ಆಚರಣೆ ಹಿಂದೆ ನಮ್ಮ ನೆಲ, ಸಂಸ್ಕೃತಿ, ಪರಂಪರೆಯ ತತ್ವಗಳು ಅಡಗಿದೆ: ಕೇಶವ ಬಂಗೇರ

ಇಂದಬೆಟ್ಟು: ರಾಷ್ಟ್ರೀಯತೆ, ಸ್ವರಾಷ್ಟ್ರ ಕಲ್ಪನೆ, ಸ್ವಧಮ೯ ಸಂರಕ್ಷಣೆಗಾಗಿ ಬಾಲಗಂಗಾಧರ ತಿಲಕ್ ಸಾವ೯ಜನಿಕವಾಗಿ ಗಣೇಶೋತ್ಸವ ಆಚರಣೆಗೆ ತಂದರು. ನಮ್ಮ ಧಾರ್ಮಿಕ

ಉತ್ಸವಗಳ ಆಚರಣೆ ಹಿಂದೆ ನಮ್ಮ ನೆಲ, ಸಂಸ್ಕೃತಿ, ಪರಂಪರೆಯ ತತ್ವಗಳು ಅಡಗಿದೆ ಎಂದು ಶ್ರೀಗೋಕರ್ಣನಾಥೇಶ್ವರ ಕಾಲೇಜು ಕುದ್ರೋಳಿಯ ಉಪನ್ಯಾಸಕ ಕೇಶವ ಬಂಗೇರ ಹೇಳಿದರು.

ಅವರು ಸೆ.8ರಂದು ವಿಶ್ವಹಿಂದೂ ಪರಿಷದ್ ಇಂದಬೆಟ್ಟು-ನಾವೂರು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಇಂದಬೆಟ್ಟು ದೇವಸ್ಥಾನದ ವಠಾರದಲ್ಲಿ ನಡೆದ ೨೫ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರಣ್ ವರ್ಮ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಯಶೋಧರ ಬಲ್ಲಾಳ್ ಬಂಗಾಡಿ ಅರಮನೆ, ಅಜಿತ್‌ಕುಮಾರ್ ಜೈನ್ ಇಂದಬೆಟ್ಟು ಗುತ್ತು,

ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಪ್ರದೀಪ್ ಎಂ., ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಂಜೀವ ಗೌಡ ಮನ್ನಡ್ಕ, ಶ್ರೀಗೋಪಾಲಕೃಷ್ಣ ದೇವಸ್ಥಾನ ನಾವೂರಿನ ಅಧ್ಯಕ್ಷ ಹರೀಶ್ ಸಾಲ್ಯಾನ್ , ವಿ.ಹಿಂ.ಪ ಇಂದು ಬೆಟ್ಟು ಚಂದ್ರಶೇಖರ ಕಾಂಜಾನು, ವಿ.ಹಿಂ.ಪ ನಾವೂರು ಅಧ್ಯಕ್ಷ ವಿಜಯ್ ಹೊಡಿಕ್ಕಾರು, ಇಂದ ಬೆಟ್ಟು ಗ್ರಾ.ಪಂ ಅಧ್ಯಕ್ಷೆ ಆಶಾಲತಾ
ಉಪಸ್ಥಿತರಿದ್ದರು. ಶಾಸಕ ಹರೀಶ್ ಪೂಂಜ ಆಗಮಿಸಿ ಗಣಪತಿ ದೇವರ ಆಶೀರ್ವಾದ ಪಡೆದರು.

ಅಧ್ಯಕ್ಷತೆಯನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವಸಮಿತಿ ಇಂದಬೆಟ್ಟು-ನಾವೂರಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬೆಳ್ಳೂರುಗುತ್ತು ವಹಿಸಿದ್ದರು.
ಸಮಾರಂಭದಲ್ಲಿ 25 ವಷ೯ಗಳಲ್ಲಿ ಗಣೇಶೋತ್ಸವವನ್ನು ಯಶಸ್ವಿಯಾಗಿ ಮುನ್ನಡೆಸಿದ ಮಾಜಿ ಅಧ್ಯಕ್ಷರುಗಳನ್ನು ಸಮಿತಿ ವತಿಯಿಂದ ಗೌರವಿಸಲಾಯಿತು. ಸಾವ೯ಜನಿಕ ಕೆಸರು ಗದ್ದೆ ಕ್ರೀಡಾಕೂಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಶಿವಶಂಕರ್ ಗೇರುಕಟ್ಟೆ ವಂದೇಮಾತರಂ ಹಾಡಿದರು. ಡಾ. ಪ್ರದೀಪ್ ಕುಮಾರ್ ಸ್ವಾಗತಿಸಿದರು. ಮೋಹನ್ ಬಂಗೇರ ಕಾರಿಂಜೆ, ಸತೀಶ್ ಮನ್ನಡ್ಕ, ವಿನೋದ್ ಕಲ್ಲಾಜೆ ಕಾಯ೯ಕ್ರಮ ನಿರೂಪಿಸಿದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ- ಸಾವಿರಾರು ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ,ಭಜನಾ ಕಮ್ಮಟದ ಉದ್ಘಾಟನೆ- ಆಕರ್ಷಕ ಕಲಾತಂಡ,ಭಜನೆ,ವಿವಿಧ ವೇಷ ಭೂಷಣಗಳಿಂದ ಶೋಭಾಯಾತ್ರೆ

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya
error: Content is protected !!