23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, ಬೆಳ್ತಂಗಡಿ ತಾಲೂಕು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ, ಬ್ರಹ್ಮಶ್ರೀ ಶಿರೋಮಣಿ ಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ಸೆ.6 ರಿಂದ 8ರ ವರೆಗೆ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವು ಶ್ರೀ ಕ್ಷೇತ್ರ ತಿಮರೋಡಿ’ ಕುಂಜರ್ಪ ವಠಾರ ಉಜಿರೆಯಲ್ಲಿ ಜರಗಿತು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಸಭೆಯನ್ನು ಮಾಡುವುದೇ, ಧರ್ಮದ ಮೇಲೆ ನಡೆಯುವ ಅನ್ಯಾಯದ ವಿರುದ್ಧ, ಜನರಿಗೆ ಸತ್ಯದ ದಾರಿಯನ್ನು ತೋರಿಸುವ ಮುಖಾಂತರ ಸನಾತನ ಹಿಂದೂ ಧರ್ಮದ ಪರಿಕಲ್ಪನೆಯನ್ನು ಜನರಿಗೆ ತಿಳಿಸುವುದೇ ಧಾರ್ಮಿಕ ಸಭೆಯ ಉದ್ದೇಶ ಎಂದರು.

ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣವರ್ ಮಾತನಾಡಿ ರಾಜಕೀಯ ವ್ಯಕ್ತಿಗಳು ಹಿಂದುತ್ವವನ್ನು ಅಕ್ಷರಶಃ ವ್ಯಾಪಾರೀಕರಣ ಮಾಡಿಕೊಂಡಿದ್ದಾರೆ. ಶ್ರೀಕೃಷ್ಣ ಪರಮಾತ್ಮ ಜನ ಸಾಮಾನ್ಯರ ಸಂಘಟನೆಯ ರೂಪದಲ್ಲಿ ನ್ಯಾಯ ಕೊಡಿಸುವುದಕ್ಕೆ ಬರುತ್ತಾನೆ ಎಂದು ಸಂಘಟನೆಯ ಶಕ್ತಿಯನ್ನು ವಿವರಿಸಿದರು.

ಮುಖ್ಯ ಅತಿಥಿಯಾಗಿ ಖ್ಯಾತ ಹಿನ್ನೆಲೆ ಗಾಯಕಿ ಶ್ರೀಮತಿ ಸುಮಾ ಎಲ್. ಎನ್. ಶಾಸ್ತ್ರಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಮೇಶ್ ನಾಯ್ಕ ನಡಿಬೆಟ್ಟು ಉಪಸ್ಥಿತರಿದ್ದರು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಪ್ರಾಸ್ತವಿಕವಾಗಿ ಮಾತನಾಡಿ, ನಿರೂಪಿಸಿ, ಧನ್ಯವಾದವಿತ್ತರು. ಜಗದೀಶ್ ನಿಡ್ಲೆ ಸ್ವಾಗತಿಸಿದರು.

Related posts

ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya
error: Content is protected !!