25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, ಬೆಳ್ತಂಗಡಿ ತಾಲೂಕು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ, ಬ್ರಹ್ಮಶ್ರೀ ಶಿರೋಮಣಿ ಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ಸೆ.6 ರಿಂದ 8ರ ವರೆಗೆ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವು ಶ್ರೀ ಕ್ಷೇತ್ರ ತಿಮರೋಡಿ’ ಕುಂಜರ್ಪ ವಠಾರ ಉಜಿರೆಯಲ್ಲಿ ಜರಗಿತು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಸಭೆಯನ್ನು ಮಾಡುವುದೇ, ಧರ್ಮದ ಮೇಲೆ ನಡೆಯುವ ಅನ್ಯಾಯದ ವಿರುದ್ಧ, ಜನರಿಗೆ ಸತ್ಯದ ದಾರಿಯನ್ನು ತೋರಿಸುವ ಮುಖಾಂತರ ಸನಾತನ ಹಿಂದೂ ಧರ್ಮದ ಪರಿಕಲ್ಪನೆಯನ್ನು ಜನರಿಗೆ ತಿಳಿಸುವುದೇ ಧಾರ್ಮಿಕ ಸಭೆಯ ಉದ್ದೇಶ ಎಂದರು.

ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣವರ್ ಮಾತನಾಡಿ ರಾಜಕೀಯ ವ್ಯಕ್ತಿಗಳು ಹಿಂದುತ್ವವನ್ನು ಅಕ್ಷರಶಃ ವ್ಯಾಪಾರೀಕರಣ ಮಾಡಿಕೊಂಡಿದ್ದಾರೆ. ಶ್ರೀಕೃಷ್ಣ ಪರಮಾತ್ಮ ಜನ ಸಾಮಾನ್ಯರ ಸಂಘಟನೆಯ ರೂಪದಲ್ಲಿ ನ್ಯಾಯ ಕೊಡಿಸುವುದಕ್ಕೆ ಬರುತ್ತಾನೆ ಎಂದು ಸಂಘಟನೆಯ ಶಕ್ತಿಯನ್ನು ವಿವರಿಸಿದರು.

ಮುಖ್ಯ ಅತಿಥಿಯಾಗಿ ಖ್ಯಾತ ಹಿನ್ನೆಲೆ ಗಾಯಕಿ ಶ್ರೀಮತಿ ಸುಮಾ ಎಲ್. ಎನ್. ಶಾಸ್ತ್ರಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಮೇಶ್ ನಾಯ್ಕ ನಡಿಬೆಟ್ಟು ಉಪಸ್ಥಿತರಿದ್ದರು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಪ್ರಾಸ್ತವಿಕವಾಗಿ ಮಾತನಾಡಿ, ನಿರೂಪಿಸಿ, ಧನ್ಯವಾದವಿತ್ತರು. ಜಗದೀಶ್ ನಿಡ್ಲೆ ಸ್ವಾಗತಿಸಿದರು.

Related posts

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಅಂತರ ಕಾಲೇಜು ಪುರುಷರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya
error: Content is protected !!