September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, ಬೆಳ್ತಂಗಡಿ ತಾಲೂಕು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ, ಬ್ರಹ್ಮಶ್ರೀ ಶಿರೋಮಣಿ ಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ಸೆ.6 ರಿಂದ 8ರ ವರೆಗೆ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವು ಶ್ರೀ ಕ್ಷೇತ್ರ ತಿಮರೋಡಿ’ ಕುಂಜರ್ಪ ವಠಾರ ಉಜಿರೆಯಲ್ಲಿ ಜರಗಿತು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಸಭೆಯನ್ನು ಮಾಡುವುದೇ, ಧರ್ಮದ ಮೇಲೆ ನಡೆಯುವ ಅನ್ಯಾಯದ ವಿರುದ್ಧ, ಜನರಿಗೆ ಸತ್ಯದ ದಾರಿಯನ್ನು ತೋರಿಸುವ ಮುಖಾಂತರ ಸನಾತನ ಹಿಂದೂ ಧರ್ಮದ ಪರಿಕಲ್ಪನೆಯನ್ನು ಜನರಿಗೆ ತಿಳಿಸುವುದೇ ಧಾರ್ಮಿಕ ಸಭೆಯ ಉದ್ದೇಶ ಎಂದರು.

ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣವರ್ ಮಾತನಾಡಿ ರಾಜಕೀಯ ವ್ಯಕ್ತಿಗಳು ಹಿಂದುತ್ವವನ್ನು ಅಕ್ಷರಶಃ ವ್ಯಾಪಾರೀಕರಣ ಮಾಡಿಕೊಂಡಿದ್ದಾರೆ. ಶ್ರೀಕೃಷ್ಣ ಪರಮಾತ್ಮ ಜನ ಸಾಮಾನ್ಯರ ಸಂಘಟನೆಯ ರೂಪದಲ್ಲಿ ನ್ಯಾಯ ಕೊಡಿಸುವುದಕ್ಕೆ ಬರುತ್ತಾನೆ ಎಂದು ಸಂಘಟನೆಯ ಶಕ್ತಿಯನ್ನು ವಿವರಿಸಿದರು.

ಮುಖ್ಯ ಅತಿಥಿಯಾಗಿ ಖ್ಯಾತ ಹಿನ್ನೆಲೆ ಗಾಯಕಿ ಶ್ರೀಮತಿ ಸುಮಾ ಎಲ್. ಎನ್. ಶಾಸ್ತ್ರಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಮೇಶ್ ನಾಯ್ಕ ನಡಿಬೆಟ್ಟು ಉಪಸ್ಥಿತರಿದ್ದರು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಪ್ರಾಸ್ತವಿಕವಾಗಿ ಮಾತನಾಡಿ, ನಿರೂಪಿಸಿ, ಧನ್ಯವಾದವಿತ್ತರು. ಜಗದೀಶ್ ನಿಡ್ಲೆ ಸ್ವಾಗತಿಸಿದರು.

Related posts

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

Suddi Udaya

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya
error: Content is protected !!