25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

ಅಂಡಿಂಜೆ: ಅಂಡಿಂಜೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 31ನೇ ವರ್ಷದ ಅಂಡಿಂಜೆ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸೆ.7ರಂದು ಜರುಗಿತು.

ಬೆಳಿಗ್ಗೆ ಗಣಹೋಮ, ಶ್ರೀ ದೇವರ ಮೂರ್ತಿ ಪ್ರತಿಷ್ಠಾಪನೆ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ನಂತರ ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಡಂಗೆ ಗುತ್ತು ಕೊಕ್ರಾಡಿ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಕಾರ್ಯದರ್ಶಿ ರಾಜಶೇಖರ್, ಉಪಾಧ್ಯಕ್ಷ ರಮೇಶ್ ಪಿಲಿಯೂರು, ಜೊತೆಕಾರ್ಯದರ್ಶಿ ಪರಮೇಶ್ವರ ಗೌಡ , ಕೋಶಾಧಿಕಾರಿ ಸುಂದರ ಭಂಡಾರಿ, ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯಕ್ಷ ತುಳು ಪರ್ಬ ಮಂಗಳೂರು ಸಂಯೋಜನೆಯಲ್ಲಿ ಡಿ. ಮನೋಹರ್ ಕುಮಾರ್ ವಿರಚಿತ ‘ತಿರುಮಲೆ ತೀರ್ಥ’ ಎಂಬ ತುಳು ಯಕ್ಷಗಾನ ಬಯಲಾಟ ನಡೆಯಿತು.

Related posts

ಕಕ್ಕಿಂಜೆ ಶಾಲಾ ಪ್ರಾರಂಭೋತ್ಸವ : ಪೋಷಕರಿಗೆ ಮಾರ್ಗದರ್ಶನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

Suddi Udaya

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya
error: Content is protected !!