ಅಂಡಿಂಜೆ: ಅಂಡಿಂಜೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 31ನೇ ವರ್ಷದ ಅಂಡಿಂಜೆ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸೆ.7ರಂದು ಜರುಗಿತು.
ಬೆಳಿಗ್ಗೆ ಗಣಹೋಮ, ಶ್ರೀ ದೇವರ ಮೂರ್ತಿ ಪ್ರತಿಷ್ಠಾಪನೆ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ನಂತರ ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಡಂಗೆ ಗುತ್ತು ಕೊಕ್ರಾಡಿ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಕಾರ್ಯದರ್ಶಿ ರಾಜಶೇಖರ್, ಉಪಾಧ್ಯಕ್ಷ ರಮೇಶ್ ಪಿಲಿಯೂರು, ಜೊತೆಕಾರ್ಯದರ್ಶಿ ಪರಮೇಶ್ವರ ಗೌಡ , ಕೋಶಾಧಿಕಾರಿ ಸುಂದರ ಭಂಡಾರಿ, ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಯಕ್ಷ ತುಳು ಪರ್ಬ ಮಂಗಳೂರು ಸಂಯೋಜನೆಯಲ್ಲಿ ಡಿ. ಮನೋಹರ್ ಕುಮಾರ್ ವಿರಚಿತ ‘ತಿರುಮಲೆ ತೀರ್ಥ’ ಎಂಬ ತುಳು ಯಕ್ಷಗಾನ ಬಯಲಾಟ ನಡೆಯಿತು.













