May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

ಕಡಿರುದ್ಯಾವರ: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಘಟಕ, ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ಕಾರ್ಯದರ್ಶಿ ಡಾ| ಅವಿನ್ ಆಳ್ವ ಹಾಗೂ ತಂಡದಿಂದ ಬುಡಕಟ್ಟು ಜನಾಂಗದವರಿಗಾಗಿ, ವಿಶಿಷ್ಟ ಆರೋಗ್ಯ ಶಿಬಿರವನ್ನು ವೈದ್ಯರ ನಡೆ ಕಾಡಿನ ಕಡೆ, ಎಂಬ ಆರೋಗ್ಯ ಶಿಬಿರವನ್ನು, ಶ್ರೀವಿದ್ಯಾ ಸರಸ್ವತಿ ಮಹಿಳಾ ಮಂಡಲ ಕಡಿರುದ್ಯಾವರದಲ್ಲಿ ನಡೆಸಲಾಯಿತು.

ಸ್ಥಳೀಯ ಮಲೆಕುಡಿಯ ಜನಾಂಗದ ಮುಖ್ಯಸ್ಥ ಐತಪ್ಪ ಮಲೆಕುಡಿಯ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಡಾ| ಅವಿನ್ ಆಳ್ವರವರು ಮಾತನಾಡುತ್ತಾ ಕಟ್ಟ ಕಡೆಯ ಜನಾಂಗಕ್ಕೆ ವೈದ್ಯಕೀಯ ಸೇವೆ ದೊರೆತರೆ ವೈದ್ಯಕೀಯ ಸೇವೆಗೆ ಸಾರ್ಥಕತೆ ದೊರಕುವುದಲ್ಲದೆ, ವೈದ್ಯರಿಗೂ ಕೂಡ ಮಾನಸಿಕ ನೆಮ್ಮದಿ ಶಾಂತಿ ಸಿಗುತ್ತದೆ ಎ೦ದರು.

ಮುಖ್ಯ ಅತಿಥಿಗಾಗಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ನಾಮನಿರ್ದೇಶಿತ ಸದಸ್ಯ ಕೆ. ನೇಮಿರಾಜ್ ರವರು ಭಾಗವಹಿಸಿದ್ದರು. ಮಹಿಳಾ ಮಂಡಲದ ಅಧ್ಯಕ್ಷೆಯಾದ ಲೋಕೇಶ್ವರಿ ವಿನಯಚಂದ್ರರವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಸ್ವಾಗತಿಸಿದರು, ಸಂಧ್ಯಾ ಹೆಬ್ಬಾರ್ ಸಿರಿಬೈಲು ಪ್ರಾರ್ಥಿಸಿ, ಭಾರತಿ ಉದ್ಧಾರ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಶಿಬಿರದಲ್ಲಿ ಸುಮಾರು 45 ಮಂದಿ ಭಾಗವಹಿಸಿದ್ದರು.

Related posts

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

Suddi Udaya
error: Content is protected !!