26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

ಕಡಿರುದ್ಯಾವರ: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಘಟಕ, ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ಕಾರ್ಯದರ್ಶಿ ಡಾ| ಅವಿನ್ ಆಳ್ವ ಹಾಗೂ ತಂಡದಿಂದ ಬುಡಕಟ್ಟು ಜನಾಂಗದವರಿಗಾಗಿ, ವಿಶಿಷ್ಟ ಆರೋಗ್ಯ ಶಿಬಿರವನ್ನು ವೈದ್ಯರ ನಡೆ ಕಾಡಿನ ಕಡೆ, ಎಂಬ ಆರೋಗ್ಯ ಶಿಬಿರವನ್ನು, ಶ್ರೀವಿದ್ಯಾ ಸರಸ್ವತಿ ಮಹಿಳಾ ಮಂಡಲ ಕಡಿರುದ್ಯಾವರದಲ್ಲಿ ನಡೆಸಲಾಯಿತು.

ಸ್ಥಳೀಯ ಮಲೆಕುಡಿಯ ಜನಾಂಗದ ಮುಖ್ಯಸ್ಥ ಐತಪ್ಪ ಮಲೆಕುಡಿಯ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಡಾ| ಅವಿನ್ ಆಳ್ವರವರು ಮಾತನಾಡುತ್ತಾ ಕಟ್ಟ ಕಡೆಯ ಜನಾಂಗಕ್ಕೆ ವೈದ್ಯಕೀಯ ಸೇವೆ ದೊರೆತರೆ ವೈದ್ಯಕೀಯ ಸೇವೆಗೆ ಸಾರ್ಥಕತೆ ದೊರಕುವುದಲ್ಲದೆ, ವೈದ್ಯರಿಗೂ ಕೂಡ ಮಾನಸಿಕ ನೆಮ್ಮದಿ ಶಾಂತಿ ಸಿಗುತ್ತದೆ ಎ೦ದರು.

ಮುಖ್ಯ ಅತಿಥಿಗಾಗಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ನಾಮನಿರ್ದೇಶಿತ ಸದಸ್ಯ ಕೆ. ನೇಮಿರಾಜ್ ರವರು ಭಾಗವಹಿಸಿದ್ದರು. ಮಹಿಳಾ ಮಂಡಲದ ಅಧ್ಯಕ್ಷೆಯಾದ ಲೋಕೇಶ್ವರಿ ವಿನಯಚಂದ್ರರವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಸ್ವಾಗತಿಸಿದರು, ಸಂಧ್ಯಾ ಹೆಬ್ಬಾರ್ ಸಿರಿಬೈಲು ಪ್ರಾರ್ಥಿಸಿ, ಭಾರತಿ ಉದ್ಧಾರ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಶಿಬಿರದಲ್ಲಿ ಸುಮಾರು 45 ಮಂದಿ ಭಾಗವಹಿಸಿದ್ದರು.

Related posts

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya
error: Content is protected !!