24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

ಚಿಬಿದ್ರೆ : ಚಿಬಿದ್ರೆ ಗ್ರಾಮದ ಪೆರಿಯಡ್ಕ ಸಮೀಪದ ಮಾಕಳ ಎಂಬಲ್ಲಿ ಆನೆ ದಾಳಿ ಮಾಡಿ ಬೆಳೆ ಹಾನಿ ಮಾಡಿದೆ.
ಸೆ.7ರಂದು ತಡರಾತ್ರಿ ಮರಿಯೊಂದಿಗೆ ದಾಳಿ ಮಾಡಿದ ಆನೆಯು, ರಾಮಣ್ಣ ಗೌಡ, ಸೋಮನಾಥ ಗೌಡ, ಲೋಕೇಶಗೌಡ, ಎಂ.ಟಿ.ಯತೀಶ್ ಅವರ ತೆಂಗು, ಬಾಳೆ, ಭತ್ತದ ಬೆಳೆ‌ಯನ್ನು ಧ್ವಂಸ ಮಾಡಿವೆ.


ರಾಮಣ್ಣಗೌಡ ಅವರ ಭತ್ತದ ಗದ್ದೆಯಲ್ಲಿ ಓಡಾಡಿರುವ ಆನೆಗಳು ಸಸಿಗಳನ್ನು ತುಳಿದು ಧ್ವಂಸಗೊಳಿಸಿವೆ. ಫಲಭರಿತ 8 ತೆಂಗಿನ ಮರಗಳನ್ನು ಉರುಳಿಸಿವೆ. ತೋಟದಲ್ಲಿದ್ದ ಬಾಳೆಗಿಡಗಳನ್ನೂ ಸಂಪೂರ್ಣವಾಗಿ ಧ್ವಂಸಗೊಳಿಸಿವೆ.
ಲೋಕೇಶ್ ಗೌಡ ಅವರ ಎರಡು ತೆಂಗಿನ ಮರ, ಬಾಳೆಗಿಡ, ಸೋಮನಾಥಗೌಡ ಅವರ ಬಾಳೆಗಿಡ, ಯತೀಶ್ ಅವರ ಬಾಳೆತೋಟ ಸಂಪೂರ್ಣವಾಗಿ ನಾಶವಾಗಿವೆ.


ಕೆಲ ದಿನಗಳ ಹಿಂದೆ ದಾಳಿ ಮಾಡಿದ್ದ ಆನೆ, ಮತ್ರಡ್ಕ ಕೃಷ್ಣಪ್ಪ ಗೌಡ, ಮಾಕಳ ಶ್ರೀನಿವಾಸ ಗೌಡ ಅವರ ಫಲಭರಿತ ಬಾಳೆ ತೋಟವನ್ನು ಧ್ವಂಸಗೊಳಿಸಿತ್ತು.
ಈ ಭಾಗದಲ್ಲಿ ಆನೆ ದಾಳಿ ಹೆಚ್ಚಾಗಿದ್ದು, ಬೆಳೆ ಹಾನಿಯಿಂದ ರೈತರು ಕಂಗೆಟ್ಟಿದ್ದಾರೆ. ಮರಿಯೊಂದಿಗಿರುವ ಆನೆಯು ಮತ್ತೆ‌ದಾಳಿ ಮಾಡುವ ಸಾಧ್ಯತೆ ಇದ್ದು, ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರೈತರು ಮನವಿ ಮಾಡಿದ್ದಾರೆ.

Related posts

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಬದನಾಜೆ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya
error: Content is protected !!