27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

ಚಿಬಿದ್ರೆ : ಚಿಬಿದ್ರೆ ಗ್ರಾಮದ ಪೆರಿಯಡ್ಕ ಸಮೀಪದ ಮಾಕಳ ಎಂಬಲ್ಲಿ ಆನೆ ದಾಳಿ ಮಾಡಿ ಬೆಳೆ ಹಾನಿ ಮಾಡಿದೆ.
ಸೆ.7ರಂದು ತಡರಾತ್ರಿ ಮರಿಯೊಂದಿಗೆ ದಾಳಿ ಮಾಡಿದ ಆನೆಯು, ರಾಮಣ್ಣ ಗೌಡ, ಸೋಮನಾಥ ಗೌಡ, ಲೋಕೇಶಗೌಡ, ಎಂ.ಟಿ.ಯತೀಶ್ ಅವರ ತೆಂಗು, ಬಾಳೆ, ಭತ್ತದ ಬೆಳೆ‌ಯನ್ನು ಧ್ವಂಸ ಮಾಡಿವೆ.


ರಾಮಣ್ಣಗೌಡ ಅವರ ಭತ್ತದ ಗದ್ದೆಯಲ್ಲಿ ಓಡಾಡಿರುವ ಆನೆಗಳು ಸಸಿಗಳನ್ನು ತುಳಿದು ಧ್ವಂಸಗೊಳಿಸಿವೆ. ಫಲಭರಿತ 8 ತೆಂಗಿನ ಮರಗಳನ್ನು ಉರುಳಿಸಿವೆ. ತೋಟದಲ್ಲಿದ್ದ ಬಾಳೆಗಿಡಗಳನ್ನೂ ಸಂಪೂರ್ಣವಾಗಿ ಧ್ವಂಸಗೊಳಿಸಿವೆ.
ಲೋಕೇಶ್ ಗೌಡ ಅವರ ಎರಡು ತೆಂಗಿನ ಮರ, ಬಾಳೆಗಿಡ, ಸೋಮನಾಥಗೌಡ ಅವರ ಬಾಳೆಗಿಡ, ಯತೀಶ್ ಅವರ ಬಾಳೆತೋಟ ಸಂಪೂರ್ಣವಾಗಿ ನಾಶವಾಗಿವೆ.


ಕೆಲ ದಿನಗಳ ಹಿಂದೆ ದಾಳಿ ಮಾಡಿದ್ದ ಆನೆ, ಮತ್ರಡ್ಕ ಕೃಷ್ಣಪ್ಪ ಗೌಡ, ಮಾಕಳ ಶ್ರೀನಿವಾಸ ಗೌಡ ಅವರ ಫಲಭರಿತ ಬಾಳೆ ತೋಟವನ್ನು ಧ್ವಂಸಗೊಳಿಸಿತ್ತು.
ಈ ಭಾಗದಲ್ಲಿ ಆನೆ ದಾಳಿ ಹೆಚ್ಚಾಗಿದ್ದು, ಬೆಳೆ ಹಾನಿಯಿಂದ ರೈತರು ಕಂಗೆಟ್ಟಿದ್ದಾರೆ. ಮರಿಯೊಂದಿಗಿರುವ ಆನೆಯು ಮತ್ತೆ‌ದಾಳಿ ಮಾಡುವ ಸಾಧ್ಯತೆ ಇದ್ದು, ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರೈತರು ಮನವಿ ಮಾಡಿದ್ದಾರೆ.

Related posts

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya
error: Content is protected !!