25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಗಾರವನ್ನು ನಡೆಸಲಾಯಿತು.

ಕಾರ್ಯಕ್ರಮವನ್ನು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಸ್ವದೇಶಿ ಜಾಗರಣ ಮಂಚ್ ಇದರ ದಕ್ಷಿಣ ಮಧ್ಯಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿಗಳಾದ ಜಗದೀಶ ಕೆ. ಇವರು ವಿದ್ಯಾರ್ಥಿಗಳು ಸರ್ಕಾರಿ ಕೆಲಸ ಎಂಬ ಜಪ ಮಾಡುವುದನ್ನು ಬಿಟ್ಟು ಸ್ವಯಂ ಉದ್ಯೋಗವನ್ನು ಮಾಡಲು ಅನೇಕ ಅವಕಾಶಗಳಿವೆ ಎಂದು ತಿಳಿಸಿದರು.

ದೇಶದ ಶೇಕಡಾ 34 ಉದ್ಯೋಗ ಸೃಷ್ಟಿಯಾಗಿರುವುದು ಗುಡಿ ಕೈಗಾರಿಕೆಗಳು ಸಣ್ಣ ಕೈಗಾರಿಕೆಗಳು ಮತ್ತು ಮಧ್ಯಮ ಕೈಗಾರಿಕೆಗಳಿಂದ ಆದುದರಿಂದ ನಾವು ಇನ್ನೊಬ್ಬರ ಕೈ ಕೆಳಗೆ ಗುಲಾಮರಂತೆ ಕೆಲಸ ಮಾಡುವ ಬದಲು ಉದ್ಯೋಗದಾತರಾಗಬೇಕು ಎಂದು ತಿಳಿಸಿದರು. ಇವರು ವಿದ್ಯಾರ್ಥಿಗಳಲ್ಲಿ ಕೌಶಲ್ಯವನ್ನು ನಿರ್ಮಾಣ ಮಾಡು ದೃಷ್ಟಿಯಿಂದ ಹಾಗೂ ಸ್ವಯಂ ಉದ್ಯೋಗವನ್ನು ಮಾಡಲು ಸರ್ಕಾರದಿಂದ ಸಿಗುವ ಬೇರೆ ಬೇರೆ ಯೋಜನೆಗಳ ಬಗ್ಗೆ ತಿಳಿಯಪಡಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಘವ ಎನ್. ಇವರು ವಹಿಸಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾ. ಕುಶಾಲಪ್ಪ ಕೆ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕರವಾದ ಪ್ರೊ. ಸುರೇಶ್ ವಿ ಮತ್ತು ಪ್ರೊ. ನವೀನ ಉಪಸ್ಥಿತರಿದ್ದರು. ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ, ರೊವರ್ ಸ್ಕೌಟ್ ಲೀಡರ್ ಡಾ. ರವಿ ಎಂ.ಎನ್. ಸ್ವಾಗತಿಸಿ, ರೇಂಜರ್ ಲೀಡರ್ ಪ್ರೊ. ರಾಜೇಶ್ವರಿ ಹೆಚ್.ಎಸ್. ವಾದಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಕುಕ್ಕೇಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗ್ರಹ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya
error: Content is protected !!