23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

ಬೆಳ್ತಂಗಡಿ: ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ(ತೆನೆ ಹಬ್ಬ)ವನ್ನು ಸೆ.8ರಂದು ಆಚರಿಸಲಾಯಿತು. ಈ ಹಬ್ಬವನ್ನು ಮಾತೆ ಕನ್ಯಾ ಮರಿಯಮ್ಮರ ಹುಟ್ಟು ಹಬ್ಬದಂದು ಆಚರಿಸುವುದು ರೂಡಿ. ಬೆಳ್ತಂಗಡಿ ಚರ್ಚ್ ಬಸ್ ಸ್ಟ್ಯಾಂಡ್ ಬಳಿಯ ಸರ್ವಿಸ್ ರೋಡ್ ಬಳಿ ತೆನೆಯನ್ನು ಆಶೀರ್ವಾದಿಸಿ ದೇವರ ಶುಭ ಸಂದೇಶವನ್ನು ಚರ್ಚ್ ಧರ್ಮ ಗುರುಗಳಾದ ವಂದನಿಯ ವಾಲ್ಟರ್ ಡಿಮೆಲ್ಲೊರವರು ತುಳುವಿನಲ್ಲಿ ನೀಡಿದರು.

ವಂದನೀಯ ಗುರುಗಳಾದ ಕ್ಲಿಫರ್ಡ್ ಪಿಂಟೊ ರವರು ತೆನೆಯನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ವಂದನೀಯ ಗುರುಗಳಾದ ಜೇಸುದಾಸ್ ಕೂಡ ಉಪಸ್ಥಿತರಿದ್ದರು. ಮೆರವಣಿಗೆ ನಡೆದು ಚರ್ಚ್ನಲ್ಲಿ ಬಲಿಪೂಜೆ ನಡೆಯಿತು. ಹಲವಾರು ಭಕ್ತರು ಈ ಬಲಿಪೂಜೆಯಲ್ಲಿ ಪಾಲುಗೊಂಡರು. ಬಲಿಪೂಜೆಯ ನಂತರ ಎಲ್ಲಾ ಭಕ್ತರಿಗೆ ಸಿಹಿ ಹಂಚಲಾಯಿತು ಹಾಗೂ ಎಲ್ಲಾ ವಾಹನಗಳನ್ನು ಆಶೀರ್ವಾದಿಸಲಾಯಿತು. ಎಲ್ಲರು ತಮ್ಮ ತಮ್ಮ ಮನೆಯಲ್ಲಿ ಕುಟುಂಬದವರೊಂದಿಗೆ ಹೊಸ ಊಟವನ್ನು ಸವಿಯುವುದೊಂದಿಗೆ ಸಹಬಾಳ್ವೆಯ ಸಂದೇಶವನ್ನು ಸಾರಲಾಯಿತು.

Related posts

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಇಂದು ಚಾಲನೆ: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು : ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’  

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!