23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

ಉಜಿರೆ :ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಬೆಂಗಳೂರಿನ ಗಾಂಧೀ ಭವನದಲ್ಲಿ ಸೆ. 17 ರಿಂದ 23 ರ ವರೆಗೆ ನಡೆಯುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಸ್ವಯಂ ಸೇವಕಿ ಹರ್ಷಿತಾ ಆಯ್ಕೆ ಆಗಿದ್ದಾರೆ.

ಈಕೆ ಇದೀಗ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿಯಾಗಿದ್ದು , ರಾಜ್ಯ ಮಟ್ಟದ ಯೋಗ ಸ್ಪರ್ಧಾಪಟು ಕೂಡ ಆಗಿದ್ದಾಳೆ. ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಗಳಲ್ಲಿ ಬಹುಮಾನ ಪಡೆಯುವುದರೊಂದಿಗೆ ಪ್ರಬಂಧ ಬರಹ , ಪೋಸ್ಟರ್ ರಚನೆ , ಏಕಪಾತ್ರಾಭಿನಯ , ನೃತ್ಯ , ಪ್ರಹಸನ , ಕಾರ್ಯಕ್ರಮ ನಿರ್ವಹಣೆ ಇತ್ಯಾದಿಗಳಲ್ಲಿಯೂ ತೊಡಗಿಸಿಕೊಂಡಿದ್ದಾಳೆ.
ಪ್ರೌಢಶಾಲೆಯ ಎನ್ ಸಿ ಸಿ ಯಲ್ಲಿ ಸಾರ್ಜೆಂಟ್ ಕೂಡ ಆಗಿದ್ದ ಈಕೆ ಉಜಿರೆಯ ರೆಂಜಾಳದ ಅಣ್ಣು ನಾಯ್ಕ್ ಹಾಗೂ ಸುಶೀಲಾ ದಂಪತಿಯ ಪುತ್ರಿ.
ಇವಳ ಆಯ್ಕೆಗೆ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಶುಭ ಹಾರೈಸಿದ್ದಾರೆ.

Related posts

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ: ದಿ ಹಾರ್ಟ್ ಆಫ್ ಧರ್ಮ ಕೃತಿ ಲೋಕಾರ್ಪಣೆ

Suddi Udaya
error: Content is protected !!