25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

ಲಾಯಿಲ : ತಂತ್ರಜ್ಞಾನದ ವಿದ್ಯೆ ಎನ್ನುವಂತದ್ದು ಇಂದಿನ ಪ್ರಾಪಂಚಿಕ ವ್ಯವಹಾರಕ್ಕೆ ಅತ್ಯವಶ್ಯವಾಗಿದೆ. ಜೀವನದಲ್ಲಿ ಕಲಿಕೆ ನಿರಂತರವಾಗಿರಬೇಕು. ಜ್ಞಾನವು ಎಂದೂ ಕರಗದ ಸಂಪತ್ತು. ತಾವುಗಳು ಮುಂದಿನ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು. ಇಷ್ಟು ದೊಡ್ಡ ಸಂಸ್ಥೆಯಲ್ಲಿ ಬಂದು ತಾವು ಕಂಪ್ಯೂಟ‌ರ್ ತರಗತಿ ಪಡೆದುಕೊಂಡಿದ್ದು ತಮಗೆ ಹೆಮ್ಮೆಯ ವಿಷಯವಾಗಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ – ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಸಿಬ್ಬಂದಿ – ಮಾನವ ಸಂಪನ್ಮೂಲ ವಿಭಾಗದ ಯೋಜನಾಧಿಕಾರಿ ಶ್ರೀನಿವಾಸ್ ಕಂಪ್ಯೂಟ‌ರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.

ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ವಿತರಿಸಲಾಯಿತು. ಒಟ್ಟು 22 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆದುಕೊಂಡಿರುತ್ತಾರೆ. ಈ ಸಂದರ್ಭದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಸೋಮನಾಥ್ ಕೆ. ಕಛೇರಿ ಪ್ರಬಂಧಕ ಅಣ್ಣು ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಂಪ್ಯೂಟರ್ ತರಬೇತುದಾರರಾದ ಜಯಶ್ರೀ ಇವರು ನಿರ್ವಹಣೆ ಮಾಡಿ, ವಿದ್ಯಾರ್ಥಿಗಳಿಗೆ ಶುಭಕೋರಿದರು.

Related posts

ಬೆಳಾಲು: ಮಾಯ ಸ.ಉ.ಪ್ರಾ. ಶಾಲೆಯಲ್ಲಿ ರೂ.8.35 ಲಕ್ಷ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

Suddi Udaya
error: Content is protected !!