24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

ಅಂಡಿಂಜೆ: ಅಂಡಿಂಜೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 31ನೇ ವರ್ಷದ ಅಂಡಿಂಜೆ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸೆ.7ರಂದು ಜರುಗಿತು.

ಬೆಳಿಗ್ಗೆ ಗಣಹೋಮ, ಶ್ರೀ ದೇವರ ಮೂರ್ತಿ ಪ್ರತಿಷ್ಠಾಪನೆ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ನಂತರ ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಡಂಗೆ ಗುತ್ತು ಕೊಕ್ರಾಡಿ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಕಾರ್ಯದರ್ಶಿ ರಾಜಶೇಖರ್, ಉಪಾಧ್ಯಕ್ಷ ರಮೇಶ್ ಪಿಲಿಯೂರು, ಜೊತೆಕಾರ್ಯದರ್ಶಿ ಪರಮೇಶ್ವರ ಗೌಡ , ಕೋಶಾಧಿಕಾರಿ ಸುಂದರ ಭಂಡಾರಿ, ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯಕ್ಷ ತುಳು ಪರ್ಬ ಮಂಗಳೂರು ಸಂಯೋಜನೆಯಲ್ಲಿ ಡಿ. ಮನೋಹರ್ ಕುಮಾರ್ ವಿರಚಿತ ‘ತಿರುಮಲೆ ತೀರ್ಥ’ ಎಂಬ ತುಳು ಯಕ್ಷಗಾನ ಬಯಲಾಟ ನಡೆಯಿತು.

Related posts

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya
error: Content is protected !!