May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

ಕಡಿರುದ್ಯಾವರ: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಘಟಕ, ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ಕಾರ್ಯದರ್ಶಿ ಡಾ| ಅವಿನ್ ಆಳ್ವ ಹಾಗೂ ತಂಡದಿಂದ ಬುಡಕಟ್ಟು ಜನಾಂಗದವರಿಗಾಗಿ, ವಿಶಿಷ್ಟ ಆರೋಗ್ಯ ಶಿಬಿರವನ್ನು ವೈದ್ಯರ ನಡೆ ಕಾಡಿನ ಕಡೆ, ಎಂಬ ಆರೋಗ್ಯ ಶಿಬಿರವನ್ನು, ಶ್ರೀವಿದ್ಯಾ ಸರಸ್ವತಿ ಮಹಿಳಾ ಮಂಡಲ ಕಡಿರುದ್ಯಾವರದಲ್ಲಿ ನಡೆಸಲಾಯಿತು.

ಸ್ಥಳೀಯ ಮಲೆಕುಡಿಯ ಜನಾಂಗದ ಮುಖ್ಯಸ್ಥ ಐತಪ್ಪ ಮಲೆಕುಡಿಯ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಡಾ| ಅವಿನ್ ಆಳ್ವರವರು ಮಾತನಾಡುತ್ತಾ ಕಟ್ಟ ಕಡೆಯ ಜನಾಂಗಕ್ಕೆ ವೈದ್ಯಕೀಯ ಸೇವೆ ದೊರೆತರೆ ವೈದ್ಯಕೀಯ ಸೇವೆಗೆ ಸಾರ್ಥಕತೆ ದೊರಕುವುದಲ್ಲದೆ, ವೈದ್ಯರಿಗೂ ಕೂಡ ಮಾನಸಿಕ ನೆಮ್ಮದಿ ಶಾಂತಿ ಸಿಗುತ್ತದೆ ಎ೦ದರು.

ಮುಖ್ಯ ಅತಿಥಿಗಾಗಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ನಾಮನಿರ್ದೇಶಿತ ಸದಸ್ಯ ಕೆ. ನೇಮಿರಾಜ್ ರವರು ಭಾಗವಹಿಸಿದ್ದರು. ಮಹಿಳಾ ಮಂಡಲದ ಅಧ್ಯಕ್ಷೆಯಾದ ಲೋಕೇಶ್ವರಿ ವಿನಯಚಂದ್ರರವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಸ್ವಾಗತಿಸಿದರು, ಸಂಧ್ಯಾ ಹೆಬ್ಬಾರ್ ಸಿರಿಬೈಲು ಪ್ರಾರ್ಥಿಸಿ, ಭಾರತಿ ಉದ್ಧಾರ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಶಿಬಿರದಲ್ಲಿ ಸುಮಾರು 45 ಮಂದಿ ಭಾಗವಹಿಸಿದ್ದರು.

Related posts

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya
error: Content is protected !!