May 6, 2026
ಗ್ರಾಮಾಂತರ ಸುದ್ದಿ

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳ್ತಂಗಡಿ; ವಿದ್ಯಾರ್ಥಿಗಳನ್ನೇ ಗುರಿಯಾಗಿಸಿರಿಕೊಂಡು ವ್ಯಸನಗಳನ್ನು ಬಿತ್ತುವ ಕಾರ್ಯ ನಡೆಯುತ್ತಿದ್ದು, ಈ ಬಗ್ಗೆ ಸಾಕಷ್ಟು ಎಚ್ಚರ ಮುಖ್ಯ. ವಿದ್ಯಾರ್ಥಿಗಳು ಈ ರೀತಿಯಾಗಿ ಯಾವುದೇ ದುಶ್ಚಟ್ಲಗಳಿಗೆ ಬಲಿ‌ಬೀಳದಂತೆ ಜಾಗ್ರತೆ ವಹಿಸಬೇಕು ಎಂದು ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ನಾಮದೇವ ರಾವ್ ಮುಂಡಾಜೆ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಇವುಗಳ ಜಂಟಿ ಆಶ್ರಯದಲ್ಲಿ ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸೆ.9 ರಂದು ಹಮ್ಮಿಕೊಂಡಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ‌ ಅವರು ಮಾತನಾಡುತ್ತಿದ್ದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ‌ ಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮಾ ಅವರು ಮಾತನಾಡಿ, ವಿದ್ಯಾರ್ಥಿ‌ ಜೀವನ ಪಾವನವಾದದ್ದು. ಭವಿಷ್ಯದ ಬದುಕು ರೂಪಿಸಿಕೊಳ್ಳಬೇಕಾದ ನೀವು ಯಾವುದೇ ವ್ಯಸನಗಳ ಕಡೆಗೆ ಆಕರ್ಷಿತರಾಗಬಾರದು. ಅದಕ್ಕಾಗಿ ಗ್ರಾ. ಯೋಜನೆ ಹಾಗೂ ಜನಜಾಗೃತಿ ವೇದಿಕೆ ಈ‌ಮಹತ್ ಕಾರ್ಯ‌ಕೈಗೆತ್ತಿಕೊಂಡಿದೆ ಎಂದರು. ಪತ್ರಕರ್ತ, ಜನಜಾಗೃತಿ ವೇದಿಕೆಯ ತಾ.ಸಮಿತಿ ಸದಸ್ಯ ಅಚ್ಚು ಮುಂಡಾಜೆ ಸಂಪನ್ಮೂಲ ವ್ಯಕ್ತಿಯಾಗಿದ್ದು, ವ್ಯಸನಗಳಿಂದ ಆಗುವ ಅನಾಹುತಗಳ ಬಗ್ಗೆ ಉದಾಹರಣೆ ಸಹಿತ ಮಾಹಿತಿ‌ ನೀಡಿದರು.
ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ದನ ಮಾಚಾರು ಪ್ರಸ್ತಾವನೆಗೈದರು. ವಿಭಾಗದ ಸೇವಾ ಪ್ರತಿನಿಧಿ ದಿಶಾ ಜಿನೇಶ್ ವೇದಿಕೆಯಲ್ಲಿ‌ ಉಪಸ್ಥಿತರಿದ್ದರು.
ಶಿಕ್ಷಕಿ ಸಾವಿತ್ರಿ ಸ್ವಾಗತಿಸಿದರೆ, ಹೇಮಲತಾ ನಿರೂಪಿಸಿದರು.‌ ಶಿಕ್ಷಕ ಸುಧೀಂದ್ರ, ವಿದ್ಯಾರ್ಥಿ ನಾಯಕಿ ಮುಕ್ಷಿತಾ, ಉಪನಾಯಕ ಮುಹಮ್ಮದ್ ಸಾನಿದ್ ಸಹಕಾರ ನೀಡಿದರು. ಶಿಕ್ಷಕಿ
ಹೇಮಲತಾ ಧನ್ಯವಾದವಿತ್ತರು.

Related posts

ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya
error: Content is protected !!