28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

ಚಿಬಿದ್ರೆ : ಚಿಬಿದ್ರೆ ಗ್ರಾಮದ ಪೆರಿಯಡ್ಕ ಸಮೀಪದ ಮಾಕಳ ಎಂಬಲ್ಲಿ ಆನೆ ದಾಳಿ ಮಾಡಿ ಬೆಳೆ ಹಾನಿ ಮಾಡಿದೆ.
ಸೆ.7ರಂದು ತಡರಾತ್ರಿ ಮರಿಯೊಂದಿಗೆ ದಾಳಿ ಮಾಡಿದ ಆನೆಯು, ರಾಮಣ್ಣ ಗೌಡ, ಸೋಮನಾಥ ಗೌಡ, ಲೋಕೇಶಗೌಡ, ಎಂ.ಟಿ.ಯತೀಶ್ ಅವರ ತೆಂಗು, ಬಾಳೆ, ಭತ್ತದ ಬೆಳೆ‌ಯನ್ನು ಧ್ವಂಸ ಮಾಡಿವೆ.


ರಾಮಣ್ಣಗೌಡ ಅವರ ಭತ್ತದ ಗದ್ದೆಯಲ್ಲಿ ಓಡಾಡಿರುವ ಆನೆಗಳು ಸಸಿಗಳನ್ನು ತುಳಿದು ಧ್ವಂಸಗೊಳಿಸಿವೆ. ಫಲಭರಿತ 8 ತೆಂಗಿನ ಮರಗಳನ್ನು ಉರುಳಿಸಿವೆ. ತೋಟದಲ್ಲಿದ್ದ ಬಾಳೆಗಿಡಗಳನ್ನೂ ಸಂಪೂರ್ಣವಾಗಿ ಧ್ವಂಸಗೊಳಿಸಿವೆ.
ಲೋಕೇಶ್ ಗೌಡ ಅವರ ಎರಡು ತೆಂಗಿನ ಮರ, ಬಾಳೆಗಿಡ, ಸೋಮನಾಥಗೌಡ ಅವರ ಬಾಳೆಗಿಡ, ಯತೀಶ್ ಅವರ ಬಾಳೆತೋಟ ಸಂಪೂರ್ಣವಾಗಿ ನಾಶವಾಗಿವೆ.


ಕೆಲ ದಿನಗಳ ಹಿಂದೆ ದಾಳಿ ಮಾಡಿದ್ದ ಆನೆ, ಮತ್ರಡ್ಕ ಕೃಷ್ಣಪ್ಪ ಗೌಡ, ಮಾಕಳ ಶ್ರೀನಿವಾಸ ಗೌಡ ಅವರ ಫಲಭರಿತ ಬಾಳೆ ತೋಟವನ್ನು ಧ್ವಂಸಗೊಳಿಸಿತ್ತು.
ಈ ಭಾಗದಲ್ಲಿ ಆನೆ ದಾಳಿ ಹೆಚ್ಚಾಗಿದ್ದು, ಬೆಳೆ ಹಾನಿಯಿಂದ ರೈತರು ಕಂಗೆಟ್ಟಿದ್ದಾರೆ. ಮರಿಯೊಂದಿಗಿರುವ ಆನೆಯು ಮತ್ತೆ‌ದಾಳಿ ಮಾಡುವ ಸಾಧ್ಯತೆ ಇದ್ದು, ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರೈತರು ಮನವಿ ಮಾಡಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ಏಕಾಏಕಿ ಚಲಿಸಿದ ಲಾರಿ: ಚಾಲಕ ಬಂದಾರು ನಿವಾಸಿ ಮಹೇಶ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತ್ಯು

Suddi Udaya

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

Suddi Udaya

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

Suddi Udaya
error: Content is protected !!