24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

ಚಿಬಿದ್ರೆ : ಚಿಬಿದ್ರೆ ಗ್ರಾಮದ ಪೆರಿಯಡ್ಕ ಸಮೀಪದ ಮಾಕಳ ಎಂಬಲ್ಲಿ ಆನೆ ದಾಳಿ ಮಾಡಿ ಬೆಳೆ ಹಾನಿ ಮಾಡಿದೆ.
ಸೆ.7ರಂದು ತಡರಾತ್ರಿ ಮರಿಯೊಂದಿಗೆ ದಾಳಿ ಮಾಡಿದ ಆನೆಯು, ರಾಮಣ್ಣ ಗೌಡ, ಸೋಮನಾಥ ಗೌಡ, ಲೋಕೇಶಗೌಡ, ಎಂ.ಟಿ.ಯತೀಶ್ ಅವರ ತೆಂಗು, ಬಾಳೆ, ಭತ್ತದ ಬೆಳೆ‌ಯನ್ನು ಧ್ವಂಸ ಮಾಡಿವೆ.


ರಾಮಣ್ಣಗೌಡ ಅವರ ಭತ್ತದ ಗದ್ದೆಯಲ್ಲಿ ಓಡಾಡಿರುವ ಆನೆಗಳು ಸಸಿಗಳನ್ನು ತುಳಿದು ಧ್ವಂಸಗೊಳಿಸಿವೆ. ಫಲಭರಿತ 8 ತೆಂಗಿನ ಮರಗಳನ್ನು ಉರುಳಿಸಿವೆ. ತೋಟದಲ್ಲಿದ್ದ ಬಾಳೆಗಿಡಗಳನ್ನೂ ಸಂಪೂರ್ಣವಾಗಿ ಧ್ವಂಸಗೊಳಿಸಿವೆ.
ಲೋಕೇಶ್ ಗೌಡ ಅವರ ಎರಡು ತೆಂಗಿನ ಮರ, ಬಾಳೆಗಿಡ, ಸೋಮನಾಥಗೌಡ ಅವರ ಬಾಳೆಗಿಡ, ಯತೀಶ್ ಅವರ ಬಾಳೆತೋಟ ಸಂಪೂರ್ಣವಾಗಿ ನಾಶವಾಗಿವೆ.


ಕೆಲ ದಿನಗಳ ಹಿಂದೆ ದಾಳಿ ಮಾಡಿದ್ದ ಆನೆ, ಮತ್ರಡ್ಕ ಕೃಷ್ಣಪ್ಪ ಗೌಡ, ಮಾಕಳ ಶ್ರೀನಿವಾಸ ಗೌಡ ಅವರ ಫಲಭರಿತ ಬಾಳೆ ತೋಟವನ್ನು ಧ್ವಂಸಗೊಳಿಸಿತ್ತು.
ಈ ಭಾಗದಲ್ಲಿ ಆನೆ ದಾಳಿ ಹೆಚ್ಚಾಗಿದ್ದು, ಬೆಳೆ ಹಾನಿಯಿಂದ ರೈತರು ಕಂಗೆಟ್ಟಿದ್ದಾರೆ. ಮರಿಯೊಂದಿಗಿರುವ ಆನೆಯು ಮತ್ತೆ‌ದಾಳಿ ಮಾಡುವ ಸಾಧ್ಯತೆ ಇದ್ದು, ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರೈತರು ಮನವಿ ಮಾಡಿದ್ದಾರೆ.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಶಹಝಾದ್ ಗೆ 616 ಅಂಕ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya
error: Content is protected !!