May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

ಚಿಬಿದ್ರೆ : ಚಿಬಿದ್ರೆ ಗ್ರಾಮದ ಪೆರಿಯಡ್ಕ ಸಮೀಪದ ಮಾಕಳ ಎಂಬಲ್ಲಿ ಆನೆ ದಾಳಿ ಮಾಡಿ ಬೆಳೆ ಹಾನಿ ಮಾಡಿದೆ.
ಸೆ.7ರಂದು ತಡರಾತ್ರಿ ಮರಿಯೊಂದಿಗೆ ದಾಳಿ ಮಾಡಿದ ಆನೆಯು, ರಾಮಣ್ಣ ಗೌಡ, ಸೋಮನಾಥ ಗೌಡ, ಲೋಕೇಶಗೌಡ, ಎಂ.ಟಿ.ಯತೀಶ್ ಅವರ ತೆಂಗು, ಬಾಳೆ, ಭತ್ತದ ಬೆಳೆ‌ಯನ್ನು ಧ್ವಂಸ ಮಾಡಿವೆ.


ರಾಮಣ್ಣಗೌಡ ಅವರ ಭತ್ತದ ಗದ್ದೆಯಲ್ಲಿ ಓಡಾಡಿರುವ ಆನೆಗಳು ಸಸಿಗಳನ್ನು ತುಳಿದು ಧ್ವಂಸಗೊಳಿಸಿವೆ. ಫಲಭರಿತ 8 ತೆಂಗಿನ ಮರಗಳನ್ನು ಉರುಳಿಸಿವೆ. ತೋಟದಲ್ಲಿದ್ದ ಬಾಳೆಗಿಡಗಳನ್ನೂ ಸಂಪೂರ್ಣವಾಗಿ ಧ್ವಂಸಗೊಳಿಸಿವೆ.
ಲೋಕೇಶ್ ಗೌಡ ಅವರ ಎರಡು ತೆಂಗಿನ ಮರ, ಬಾಳೆಗಿಡ, ಸೋಮನಾಥಗೌಡ ಅವರ ಬಾಳೆಗಿಡ, ಯತೀಶ್ ಅವರ ಬಾಳೆತೋಟ ಸಂಪೂರ್ಣವಾಗಿ ನಾಶವಾಗಿವೆ.


ಕೆಲ ದಿನಗಳ ಹಿಂದೆ ದಾಳಿ ಮಾಡಿದ್ದ ಆನೆ, ಮತ್ರಡ್ಕ ಕೃಷ್ಣಪ್ಪ ಗೌಡ, ಮಾಕಳ ಶ್ರೀನಿವಾಸ ಗೌಡ ಅವರ ಫಲಭರಿತ ಬಾಳೆ ತೋಟವನ್ನು ಧ್ವಂಸಗೊಳಿಸಿತ್ತು.
ಈ ಭಾಗದಲ್ಲಿ ಆನೆ ದಾಳಿ ಹೆಚ್ಚಾಗಿದ್ದು, ಬೆಳೆ ಹಾನಿಯಿಂದ ರೈತರು ಕಂಗೆಟ್ಟಿದ್ದಾರೆ. ಮರಿಯೊಂದಿಗಿರುವ ಆನೆಯು ಮತ್ತೆ‌ದಾಳಿ ಮಾಡುವ ಸಾಧ್ಯತೆ ಇದ್ದು, ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರೈತರು ಮನವಿ ಮಾಡಿದ್ದಾರೆ.

Related posts

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕಿನಾದ್ಯಂತ ಗಾಳಿ ಮಳೆ: ವಿವಿಧ ಕಡೆಗಳಲ್ಲಿ ಹಾನಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

Suddi Udaya

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya
error: Content is protected !!