24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

ಚಿಬಿದ್ರೆ : ಚಿಬಿದ್ರೆ ಗ್ರಾಮದ ಪೆರಿಯಡ್ಕ ಸಮೀಪದ ಮಾಕಳ ಎಂಬಲ್ಲಿ ಆನೆ ದಾಳಿ ಮಾಡಿ ಬೆಳೆ ಹಾನಿ ಮಾಡಿದೆ.
ಸೆ.7ರಂದು ತಡರಾತ್ರಿ ಮರಿಯೊಂದಿಗೆ ದಾಳಿ ಮಾಡಿದ ಆನೆಯು, ರಾಮಣ್ಣ ಗೌಡ, ಸೋಮನಾಥ ಗೌಡ, ಲೋಕೇಶಗೌಡ, ಎಂ.ಟಿ.ಯತೀಶ್ ಅವರ ತೆಂಗು, ಬಾಳೆ, ಭತ್ತದ ಬೆಳೆ‌ಯನ್ನು ಧ್ವಂಸ ಮಾಡಿವೆ.


ರಾಮಣ್ಣಗೌಡ ಅವರ ಭತ್ತದ ಗದ್ದೆಯಲ್ಲಿ ಓಡಾಡಿರುವ ಆನೆಗಳು ಸಸಿಗಳನ್ನು ತುಳಿದು ಧ್ವಂಸಗೊಳಿಸಿವೆ. ಫಲಭರಿತ 8 ತೆಂಗಿನ ಮರಗಳನ್ನು ಉರುಳಿಸಿವೆ. ತೋಟದಲ್ಲಿದ್ದ ಬಾಳೆಗಿಡಗಳನ್ನೂ ಸಂಪೂರ್ಣವಾಗಿ ಧ್ವಂಸಗೊಳಿಸಿವೆ.
ಲೋಕೇಶ್ ಗೌಡ ಅವರ ಎರಡು ತೆಂಗಿನ ಮರ, ಬಾಳೆಗಿಡ, ಸೋಮನಾಥಗೌಡ ಅವರ ಬಾಳೆಗಿಡ, ಯತೀಶ್ ಅವರ ಬಾಳೆತೋಟ ಸಂಪೂರ್ಣವಾಗಿ ನಾಶವಾಗಿವೆ.


ಕೆಲ ದಿನಗಳ ಹಿಂದೆ ದಾಳಿ ಮಾಡಿದ್ದ ಆನೆ, ಮತ್ರಡ್ಕ ಕೃಷ್ಣಪ್ಪ ಗೌಡ, ಮಾಕಳ ಶ್ರೀನಿವಾಸ ಗೌಡ ಅವರ ಫಲಭರಿತ ಬಾಳೆ ತೋಟವನ್ನು ಧ್ವಂಸಗೊಳಿಸಿತ್ತು.
ಈ ಭಾಗದಲ್ಲಿ ಆನೆ ದಾಳಿ ಹೆಚ್ಚಾಗಿದ್ದು, ಬೆಳೆ ಹಾನಿಯಿಂದ ರೈತರು ಕಂಗೆಟ್ಟಿದ್ದಾರೆ. ಮರಿಯೊಂದಿಗಿರುವ ಆನೆಯು ಮತ್ತೆ‌ದಾಳಿ ಮಾಡುವ ಸಾಧ್ಯತೆ ಇದ್ದು, ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರೈತರು ಮನವಿ ಮಾಡಿದ್ದಾರೆ.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya

ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ನಿವೃತ್ತ ಸಾಧಕ ಯೋಧ ಪ್ರಶಸ್ತಿಗೆ ಆಯ್ಕೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya
error: Content is protected !!