30.1 C
ಪುತ್ತೂರು, ಬೆಳ್ತಂಗಡಿ
June 20, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

ಬೆಳಾಲು : ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ಸೆ. 6 ರಂದು ಜರಗಿತು.
ತ್ರೋಬಾಲ್ ಪಂದ್ಯಾಟವನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಇವರು ದೀಪ ಬೆಳಗಿಸಿ ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭವಾನಿ ಮಾರ್ಪಾಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ, ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ಉಪಸ್ಥಿತರಿದ್ದರು.

ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ . ದ್ವಿತೀಯ ಸ್ಥಾನ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಸರ್ಕಾರಿ ಪ್ರೌಢಶಾಲೆ ಕಾಯರ್ತ್ತಡ್ಕ , ದ್ವಿತೀಯ ಸ್ಥಾನ ಸರ್ಕಾರಿ ಪ್ರೌಢಶಾಲೆ ಬದನಾಜೆ ಪಡೆದುಕೊಂಡಿತು.

ಮುಖ್ಯೋಪಾಧ್ಯಾಯರಾದ ಜಯರಾಮ್ ಮಯ್ಯ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಕೋಕಿಲ ವಂದಿಸಿದರು. ಶಿಕ್ಷಕರಾದ ಸುಮನ್ ಯು. ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya
error: Content is protected !!