28 C
ಪುತ್ತೂರು, ಬೆಳ್ತಂಗಡಿ
August 5, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

ಬೆಳಾಲು : ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ಸೆ. 6 ರಂದು ಜರಗಿತು.
ತ್ರೋಬಾಲ್ ಪಂದ್ಯಾಟವನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಇವರು ದೀಪ ಬೆಳಗಿಸಿ ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭವಾನಿ ಮಾರ್ಪಾಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ, ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ಉಪಸ್ಥಿತರಿದ್ದರು.

ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ . ದ್ವಿತೀಯ ಸ್ಥಾನ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಸರ್ಕಾರಿ ಪ್ರೌಢಶಾಲೆ ಕಾಯರ್ತ್ತಡ್ಕ , ದ್ವಿತೀಯ ಸ್ಥಾನ ಸರ್ಕಾರಿ ಪ್ರೌಢಶಾಲೆ ಬದನಾಜೆ ಪಡೆದುಕೊಂಡಿತು.

ಮುಖ್ಯೋಪಾಧ್ಯಾಯರಾದ ಜಯರಾಮ್ ಮಯ್ಯ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಕೋಕಿಲ ವಂದಿಸಿದರು. ಶಿಕ್ಷಕರಾದ ಸುಮನ್ ಯು. ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

Suddi Udaya

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya
error: Content is protected !!