May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಪೋಷಕರು ಪ್ರೋತ್ಸಾಹ ನೀಡಬೇಕು ಎಂದು ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಕುಲಮರ್ವ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ಕಲಾ ಮತ್ತು ವಾಣಿಜ್ಯ ವಿಭಾಗದ ಶಿಕ್ಷಕ ರಕ್ಷಕ ಸಂಘದ ಸಭೆಯಲ್ಲಿ ಮಾತನಾಡುತ್ತಾ, ಪಿಯುಸಿ ಹಂತದಲ್ಲಿರುವ ಮಕ್ಕಳನ್ನು ಹೆತ್ತವರು ಸ್ನೇಹಿತರಂತೆ ಕಾಣುತ್ತಾ ಅವರಿಗೆ ಭರವಸೆಯನ್ನು ತುಂಬುತ್ತಾ ಓದಿನ ಕಡೆ ಗಮನಹರಿಸುವಂತೆ ಪ್ರೋತ್ಸಾಹಿಸಬೇಕು. ತಪ್ಪುಗಳನ್ನು ಎಸೆದಾಗ ಸಾವಧಾನದಿಂದ ಬುದ್ಧಿ ಹೇಳಿ ತಿದ್ದಿಕೊಳ್ಳಲು ಅವಕಾಶ ನೀಡಬೇಕು ಎಂದರು.


ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎನ್ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಸ್ವಾಗತಿಸಿದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬೆಳಿಯಪ್ಪ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya
error: Content is protected !!