27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

ಬೆಳ್ತಂಗಡಿ: ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ(ತೆನೆ ಹಬ್ಬ)ವನ್ನು ಸೆ.8ರಂದು ಆಚರಿಸಲಾಯಿತು. ಈ ಹಬ್ಬವನ್ನು ಮಾತೆ ಕನ್ಯಾ ಮರಿಯಮ್ಮರ ಹುಟ್ಟು ಹಬ್ಬದಂದು ಆಚರಿಸುವುದು ರೂಡಿ. ಬೆಳ್ತಂಗಡಿ ಚರ್ಚ್ ಬಸ್ ಸ್ಟ್ಯಾಂಡ್ ಬಳಿಯ ಸರ್ವಿಸ್ ರೋಡ್ ಬಳಿ ತೆನೆಯನ್ನು ಆಶೀರ್ವಾದಿಸಿ ದೇವರ ಶುಭ ಸಂದೇಶವನ್ನು ಚರ್ಚ್ ಧರ್ಮ ಗುರುಗಳಾದ ವಂದನಿಯ ವಾಲ್ಟರ್ ಡಿಮೆಲ್ಲೊರವರು ತುಳುವಿನಲ್ಲಿ ನೀಡಿದರು.

ವಂದನೀಯ ಗುರುಗಳಾದ ಕ್ಲಿಫರ್ಡ್ ಪಿಂಟೊ ರವರು ತೆನೆಯನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ವಂದನೀಯ ಗುರುಗಳಾದ ಜೇಸುದಾಸ್ ಕೂಡ ಉಪಸ್ಥಿತರಿದ್ದರು. ಮೆರವಣಿಗೆ ನಡೆದು ಚರ್ಚ್ನಲ್ಲಿ ಬಲಿಪೂಜೆ ನಡೆಯಿತು. ಹಲವಾರು ಭಕ್ತರು ಈ ಬಲಿಪೂಜೆಯಲ್ಲಿ ಪಾಲುಗೊಂಡರು. ಬಲಿಪೂಜೆಯ ನಂತರ ಎಲ್ಲಾ ಭಕ್ತರಿಗೆ ಸಿಹಿ ಹಂಚಲಾಯಿತು ಹಾಗೂ ಎಲ್ಲಾ ವಾಹನಗಳನ್ನು ಆಶೀರ್ವಾದಿಸಲಾಯಿತು. ಎಲ್ಲರು ತಮ್ಮ ತಮ್ಮ ಮನೆಯಲ್ಲಿ ಕುಟುಂಬದವರೊಂದಿಗೆ ಹೊಸ ಊಟವನ್ನು ಸವಿಯುವುದೊಂದಿಗೆ ಸಹಬಾಳ್ವೆಯ ಸಂದೇಶವನ್ನು ಸಾರಲಾಯಿತು.

Related posts

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya

ಜ.18: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!