23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

ಬೆಳ್ತಂಗಡಿ: ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ(ತೆನೆ ಹಬ್ಬ)ವನ್ನು ಸೆ.8ರಂದು ಆಚರಿಸಲಾಯಿತು. ಈ ಹಬ್ಬವನ್ನು ಮಾತೆ ಕನ್ಯಾ ಮರಿಯಮ್ಮರ ಹುಟ್ಟು ಹಬ್ಬದಂದು ಆಚರಿಸುವುದು ರೂಡಿ. ಬೆಳ್ತಂಗಡಿ ಚರ್ಚ್ ಬಸ್ ಸ್ಟ್ಯಾಂಡ್ ಬಳಿಯ ಸರ್ವಿಸ್ ರೋಡ್ ಬಳಿ ತೆನೆಯನ್ನು ಆಶೀರ್ವಾದಿಸಿ ದೇವರ ಶುಭ ಸಂದೇಶವನ್ನು ಚರ್ಚ್ ಧರ್ಮ ಗುರುಗಳಾದ ವಂದನಿಯ ವಾಲ್ಟರ್ ಡಿಮೆಲ್ಲೊರವರು ತುಳುವಿನಲ್ಲಿ ನೀಡಿದರು.

ವಂದನೀಯ ಗುರುಗಳಾದ ಕ್ಲಿಫರ್ಡ್ ಪಿಂಟೊ ರವರು ತೆನೆಯನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ವಂದನೀಯ ಗುರುಗಳಾದ ಜೇಸುದಾಸ್ ಕೂಡ ಉಪಸ್ಥಿತರಿದ್ದರು. ಮೆರವಣಿಗೆ ನಡೆದು ಚರ್ಚ್ನಲ್ಲಿ ಬಲಿಪೂಜೆ ನಡೆಯಿತು. ಹಲವಾರು ಭಕ್ತರು ಈ ಬಲಿಪೂಜೆಯಲ್ಲಿ ಪಾಲುಗೊಂಡರು. ಬಲಿಪೂಜೆಯ ನಂತರ ಎಲ್ಲಾ ಭಕ್ತರಿಗೆ ಸಿಹಿ ಹಂಚಲಾಯಿತು ಹಾಗೂ ಎಲ್ಲಾ ವಾಹನಗಳನ್ನು ಆಶೀರ್ವಾದಿಸಲಾಯಿತು. ಎಲ್ಲರು ತಮ್ಮ ತಮ್ಮ ಮನೆಯಲ್ಲಿ ಕುಟುಂಬದವರೊಂದಿಗೆ ಹೊಸ ಊಟವನ್ನು ಸವಿಯುವುದೊಂದಿಗೆ ಸಹಬಾಳ್ವೆಯ ಸಂದೇಶವನ್ನು ಸಾರಲಾಯಿತು.

Related posts

ಕಣಿಯೂರು ಗ್ರಾಮ ಪಂಚಾಯತ್ ಮುಂದೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!