28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

ಬೆಳ್ತಂಗಡಿ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವವು ಬಹಳ ವಿಜೃಂಭಣೆಯಿಂದ ನೆರವೇರಿತು.

ಶಾಲಾ ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ ಗಣೇಶೋತ್ಸವನ್ನುದ್ದೇಶಿಸಿ ವಸತಿ ಶಾಲೆಯ ಮಕ್ಕಳು ಮತ್ತು ಶಾಲೆಯ ಸಿಬ್ಬಂದಿ ರಾಧಾಕೃಷ್ಣ ಇವರು ಈ ಬಾರಿ ಪರಿಸರ ಸ್ನೇಹಿ ತರಕಾರಿ ಗಣೇಶನ ಸುಂದರವಾದ ಮೂರ್ತಿಯನ್ನು ನಿರ್ಮಿಸಿದ್ದಾರೆ. ವಸತಿ ಶಾಲೆಯಲ್ಲಿ ಹೊರ ಜಿಲ್ಲೆಯ ಮಕ್ಕಳಿಗೆ ಕೂಡ ಹಬ್ಬದ ಮಹತ್ವ ತಿಳಿಯಲಿ ಮತ್ತು ಎಲ್ಲಾ ಮಕ್ಕಳು ಕೂಡ ಸಂತೋಷದಿಂದ ಭಾಗವಹಿಸಿ ಸಂಭ್ರಮಿಸಲಿ ಎಂಬ ದೃಷ್ಟಿಯಿಂದ ಈ ಗಣೇಶೋತ್ಸವನ್ನು ಆಚರಿಸುತ್ತಿದ್ದೇವೆ ಎಂದು ಹೇಳಿದರು .

ಗಣೇಶೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ಕುಣಿತ ಭಜನೆ, ಭಕ್ತಿ ಪ್ರಧಾನ ನೃತ್ಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಸ್ಥಳೀಯ ಶಾಲೆಯ ಹಿತೈಷಿಗಳಾದ ಸೀತಾರಾಮ ರೈ ಆಗಮಿಸಿ ಮಕ್ಕಳಿಗೆ ಶುಭ ಹಾರೈಸಿದರು. ಪ್ರತೀಶ್ ಪೆರಿಂಜೆ ಎಲ್ಲರಿಗೂ ಸಿಹಿ ತಿಂಡಿ ನೀಡಿ ಸಹಕರಿಸಿದರು. ರಾಜ್ಯ ಮಟ್ಟದ ಕಬಡ್ಡಿ ತರಬೇತುದಾರ ಜಯಂತ್ ಶೆಟ್ಟಿ ಹಕ್ಕೇರಿ, ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ, ಶಾಲೆಯ ಅಡುಗೆ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗಣೇಶನ ಮೂರ್ತಿಯ ಜಲಸ್ತಂಭನದೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.

Related posts

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
error: Content is protected !!