24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

ಅಂಡಿಂಜೆ: ಅಂಡಿಂಜೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 31ನೇ ವರ್ಷದ ಅಂಡಿಂಜೆ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸೆ.7ರಂದು ಜರುಗಿತು.

ಬೆಳಿಗ್ಗೆ ಗಣಹೋಮ, ಶ್ರೀ ದೇವರ ಮೂರ್ತಿ ಪ್ರತಿಷ್ಠಾಪನೆ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ನಂತರ ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಡಂಗೆ ಗುತ್ತು ಕೊಕ್ರಾಡಿ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಕಾರ್ಯದರ್ಶಿ ರಾಜಶೇಖರ್, ಉಪಾಧ್ಯಕ್ಷ ರಮೇಶ್ ಪಿಲಿಯೂರು, ಜೊತೆಕಾರ್ಯದರ್ಶಿ ಪರಮೇಶ್ವರ ಗೌಡ , ಕೋಶಾಧಿಕಾರಿ ಸುಂದರ ಭಂಡಾರಿ, ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯಕ್ಷ ತುಳು ಪರ್ಬ ಮಂಗಳೂರು ಸಂಯೋಜನೆಯಲ್ಲಿ ಡಿ. ಮನೋಹರ್ ಕುಮಾರ್ ವಿರಚಿತ ‘ತಿರುಮಲೆ ತೀರ್ಥ’ ಎಂಬ ತುಳು ಯಕ್ಷಗಾನ ಬಯಲಾಟ ನಡೆಯಿತು.

Related posts

ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಈದ್ ಮಿಲಾದ್ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya
error: Content is protected !!