28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

ಕಡಿರುದ್ಯಾವರ: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಘಟಕ, ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ಕಾರ್ಯದರ್ಶಿ ಡಾ| ಅವಿನ್ ಆಳ್ವ ಹಾಗೂ ತಂಡದಿಂದ ಬುಡಕಟ್ಟು ಜನಾಂಗದವರಿಗಾಗಿ, ವಿಶಿಷ್ಟ ಆರೋಗ್ಯ ಶಿಬಿರವನ್ನು ವೈದ್ಯರ ನಡೆ ಕಾಡಿನ ಕಡೆ, ಎಂಬ ಆರೋಗ್ಯ ಶಿಬಿರವನ್ನು, ಶ್ರೀವಿದ್ಯಾ ಸರಸ್ವತಿ ಮಹಿಳಾ ಮಂಡಲ ಕಡಿರುದ್ಯಾವರದಲ್ಲಿ ನಡೆಸಲಾಯಿತು.

ಸ್ಥಳೀಯ ಮಲೆಕುಡಿಯ ಜನಾಂಗದ ಮುಖ್ಯಸ್ಥ ಐತಪ್ಪ ಮಲೆಕುಡಿಯ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಡಾ| ಅವಿನ್ ಆಳ್ವರವರು ಮಾತನಾಡುತ್ತಾ ಕಟ್ಟ ಕಡೆಯ ಜನಾಂಗಕ್ಕೆ ವೈದ್ಯಕೀಯ ಸೇವೆ ದೊರೆತರೆ ವೈದ್ಯಕೀಯ ಸೇವೆಗೆ ಸಾರ್ಥಕತೆ ದೊರಕುವುದಲ್ಲದೆ, ವೈದ್ಯರಿಗೂ ಕೂಡ ಮಾನಸಿಕ ನೆಮ್ಮದಿ ಶಾಂತಿ ಸಿಗುತ್ತದೆ ಎ೦ದರು.

ಮುಖ್ಯ ಅತಿಥಿಗಾಗಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ನಾಮನಿರ್ದೇಶಿತ ಸದಸ್ಯ ಕೆ. ನೇಮಿರಾಜ್ ರವರು ಭಾಗವಹಿಸಿದ್ದರು. ಮಹಿಳಾ ಮಂಡಲದ ಅಧ್ಯಕ್ಷೆಯಾದ ಲೋಕೇಶ್ವರಿ ವಿನಯಚಂದ್ರರವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಸ್ವಾಗತಿಸಿದರು, ಸಂಧ್ಯಾ ಹೆಬ್ಬಾರ್ ಸಿರಿಬೈಲು ಪ್ರಾರ್ಥಿಸಿ, ಭಾರತಿ ಉದ್ಧಾರ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಶಿಬಿರದಲ್ಲಿ ಸುಮಾರು 45 ಮಂದಿ ಭಾಗವಹಿಸಿದ್ದರು.

Related posts

ಆ.31: ಉಜಿರೆಯಲ್ಲಿ ಸಾರಥಿ ಮೋಟಾ‌ರ್ ಲಿಂಕ್ಸ್ & ಹೊಗೆ ತಪಾಸಣಾ ಕೇಂದ್ರ ಶುಭಾರಂಭ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆಯ ಕುರಿತು ಸಂವಾದ ಕಾರ್ಯಕ್ರಮ

Suddi Udaya

ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಭೇಟಿ

Suddi Udaya

ಸುರ್ಯ ಸ.ಕಿ. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಳಿಯ ಜುವೆಲ್ಲರ್ಸ್ ವತಿಯಿಂದ ಬ್ಯಾಗ್ ವಿತರಣೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!