May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

ಕಡಿರುದ್ಯಾವರ: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಘಟಕ, ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ಕಾರ್ಯದರ್ಶಿ ಡಾ| ಅವಿನ್ ಆಳ್ವ ಹಾಗೂ ತಂಡದಿಂದ ಬುಡಕಟ್ಟು ಜನಾಂಗದವರಿಗಾಗಿ, ವಿಶಿಷ್ಟ ಆರೋಗ್ಯ ಶಿಬಿರವನ್ನು ವೈದ್ಯರ ನಡೆ ಕಾಡಿನ ಕಡೆ, ಎಂಬ ಆರೋಗ್ಯ ಶಿಬಿರವನ್ನು, ಶ್ರೀವಿದ್ಯಾ ಸರಸ್ವತಿ ಮಹಿಳಾ ಮಂಡಲ ಕಡಿರುದ್ಯಾವರದಲ್ಲಿ ನಡೆಸಲಾಯಿತು.

ಸ್ಥಳೀಯ ಮಲೆಕುಡಿಯ ಜನಾಂಗದ ಮುಖ್ಯಸ್ಥ ಐತಪ್ಪ ಮಲೆಕುಡಿಯ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಡಾ| ಅವಿನ್ ಆಳ್ವರವರು ಮಾತನಾಡುತ್ತಾ ಕಟ್ಟ ಕಡೆಯ ಜನಾಂಗಕ್ಕೆ ವೈದ್ಯಕೀಯ ಸೇವೆ ದೊರೆತರೆ ವೈದ್ಯಕೀಯ ಸೇವೆಗೆ ಸಾರ್ಥಕತೆ ದೊರಕುವುದಲ್ಲದೆ, ವೈದ್ಯರಿಗೂ ಕೂಡ ಮಾನಸಿಕ ನೆಮ್ಮದಿ ಶಾಂತಿ ಸಿಗುತ್ತದೆ ಎ೦ದರು.

ಮುಖ್ಯ ಅತಿಥಿಗಾಗಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ನಾಮನಿರ್ದೇಶಿತ ಸದಸ್ಯ ಕೆ. ನೇಮಿರಾಜ್ ರವರು ಭಾಗವಹಿಸಿದ್ದರು. ಮಹಿಳಾ ಮಂಡಲದ ಅಧ್ಯಕ್ಷೆಯಾದ ಲೋಕೇಶ್ವರಿ ವಿನಯಚಂದ್ರರವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಸ್ವಾಗತಿಸಿದರು, ಸಂಧ್ಯಾ ಹೆಬ್ಬಾರ್ ಸಿರಿಬೈಲು ಪ್ರಾರ್ಥಿಸಿ, ಭಾರತಿ ಉದ್ಧಾರ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಶಿಬಿರದಲ್ಲಿ ಸುಮಾರು 45 ಮಂದಿ ಭಾಗವಹಿಸಿದ್ದರು.

Related posts

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನಕಲಿ ಚಿನ್ನದ ಹಾವಳಿ ತಡೆಗೆ ಶಾಸಕರಿಗೆ ಮನವಿ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya
error: Content is protected !!