28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

ಕಡಿರುದ್ಯಾವರ: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಘಟಕ, ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ಕಾರ್ಯದರ್ಶಿ ಡಾ| ಅವಿನ್ ಆಳ್ವ ಹಾಗೂ ತಂಡದಿಂದ ಬುಡಕಟ್ಟು ಜನಾಂಗದವರಿಗಾಗಿ, ವಿಶಿಷ್ಟ ಆರೋಗ್ಯ ಶಿಬಿರವನ್ನು ವೈದ್ಯರ ನಡೆ ಕಾಡಿನ ಕಡೆ, ಎಂಬ ಆರೋಗ್ಯ ಶಿಬಿರವನ್ನು, ಶ್ರೀವಿದ್ಯಾ ಸರಸ್ವತಿ ಮಹಿಳಾ ಮಂಡಲ ಕಡಿರುದ್ಯಾವರದಲ್ಲಿ ನಡೆಸಲಾಯಿತು.

ಸ್ಥಳೀಯ ಮಲೆಕುಡಿಯ ಜನಾಂಗದ ಮುಖ್ಯಸ್ಥ ಐತಪ್ಪ ಮಲೆಕುಡಿಯ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಡಾ| ಅವಿನ್ ಆಳ್ವರವರು ಮಾತನಾಡುತ್ತಾ ಕಟ್ಟ ಕಡೆಯ ಜನಾಂಗಕ್ಕೆ ವೈದ್ಯಕೀಯ ಸೇವೆ ದೊರೆತರೆ ವೈದ್ಯಕೀಯ ಸೇವೆಗೆ ಸಾರ್ಥಕತೆ ದೊರಕುವುದಲ್ಲದೆ, ವೈದ್ಯರಿಗೂ ಕೂಡ ಮಾನಸಿಕ ನೆಮ್ಮದಿ ಶಾಂತಿ ಸಿಗುತ್ತದೆ ಎ೦ದರು.

ಮುಖ್ಯ ಅತಿಥಿಗಾಗಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ನಾಮನಿರ್ದೇಶಿತ ಸದಸ್ಯ ಕೆ. ನೇಮಿರಾಜ್ ರವರು ಭಾಗವಹಿಸಿದ್ದರು. ಮಹಿಳಾ ಮಂಡಲದ ಅಧ್ಯಕ್ಷೆಯಾದ ಲೋಕೇಶ್ವರಿ ವಿನಯಚಂದ್ರರವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಸ್ವಾಗತಿಸಿದರು, ಸಂಧ್ಯಾ ಹೆಬ್ಬಾರ್ ಸಿರಿಬೈಲು ಪ್ರಾರ್ಥಿಸಿ, ಭಾರತಿ ಉದ್ಧಾರ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಶಿಬಿರದಲ್ಲಿ ಸುಮಾರು 45 ಮಂದಿ ಭಾಗವಹಿಸಿದ್ದರು.

Related posts

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತಾ -ಪಿತೃ ಪೂಜನ ಹಾಗೂ ಆಶೀರ್ವಾದ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

Suddi Udaya

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

Suddi Udaya
error: Content is protected !!