24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

ಚಿಬಿದ್ರೆ : ಚಿಬಿದ್ರೆ ಗ್ರಾಮದ ಪೆರಿಯಡ್ಕ ಸಮೀಪದ ಮಾಕಳ ಎಂಬಲ್ಲಿ ಆನೆ ದಾಳಿ ಮಾಡಿ ಬೆಳೆ ಹಾನಿ ಮಾಡಿದೆ.
ಸೆ.7ರಂದು ತಡರಾತ್ರಿ ಮರಿಯೊಂದಿಗೆ ದಾಳಿ ಮಾಡಿದ ಆನೆಯು, ರಾಮಣ್ಣ ಗೌಡ, ಸೋಮನಾಥ ಗೌಡ, ಲೋಕೇಶಗೌಡ, ಎಂ.ಟಿ.ಯತೀಶ್ ಅವರ ತೆಂಗು, ಬಾಳೆ, ಭತ್ತದ ಬೆಳೆ‌ಯನ್ನು ಧ್ವಂಸ ಮಾಡಿವೆ.


ರಾಮಣ್ಣಗೌಡ ಅವರ ಭತ್ತದ ಗದ್ದೆಯಲ್ಲಿ ಓಡಾಡಿರುವ ಆನೆಗಳು ಸಸಿಗಳನ್ನು ತುಳಿದು ಧ್ವಂಸಗೊಳಿಸಿವೆ. ಫಲಭರಿತ 8 ತೆಂಗಿನ ಮರಗಳನ್ನು ಉರುಳಿಸಿವೆ. ತೋಟದಲ್ಲಿದ್ದ ಬಾಳೆಗಿಡಗಳನ್ನೂ ಸಂಪೂರ್ಣವಾಗಿ ಧ್ವಂಸಗೊಳಿಸಿವೆ.
ಲೋಕೇಶ್ ಗೌಡ ಅವರ ಎರಡು ತೆಂಗಿನ ಮರ, ಬಾಳೆಗಿಡ, ಸೋಮನಾಥಗೌಡ ಅವರ ಬಾಳೆಗಿಡ, ಯತೀಶ್ ಅವರ ಬಾಳೆತೋಟ ಸಂಪೂರ್ಣವಾಗಿ ನಾಶವಾಗಿವೆ.


ಕೆಲ ದಿನಗಳ ಹಿಂದೆ ದಾಳಿ ಮಾಡಿದ್ದ ಆನೆ, ಮತ್ರಡ್ಕ ಕೃಷ್ಣಪ್ಪ ಗೌಡ, ಮಾಕಳ ಶ್ರೀನಿವಾಸ ಗೌಡ ಅವರ ಫಲಭರಿತ ಬಾಳೆ ತೋಟವನ್ನು ಧ್ವಂಸಗೊಳಿಸಿತ್ತು.
ಈ ಭಾಗದಲ್ಲಿ ಆನೆ ದಾಳಿ ಹೆಚ್ಚಾಗಿದ್ದು, ಬೆಳೆ ಹಾನಿಯಿಂದ ರೈತರು ಕಂಗೆಟ್ಟಿದ್ದಾರೆ. ಮರಿಯೊಂದಿಗಿರುವ ಆನೆಯು ಮತ್ತೆ‌ದಾಳಿ ಮಾಡುವ ಸಾಧ್ಯತೆ ಇದ್ದು, ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರೈತರು ಮನವಿ ಮಾಡಿದ್ದಾರೆ.

Related posts

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya
error: Content is protected !!