May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

ಚಿಬಿದ್ರೆ : ಚಿಬಿದ್ರೆ ಗ್ರಾಮದ ಪೆರಿಯಡ್ಕ ಸಮೀಪದ ಮಾಕಳ ಎಂಬಲ್ಲಿ ಆನೆ ದಾಳಿ ಮಾಡಿ ಬೆಳೆ ಹಾನಿ ಮಾಡಿದೆ.
ಸೆ.7ರಂದು ತಡರಾತ್ರಿ ಮರಿಯೊಂದಿಗೆ ದಾಳಿ ಮಾಡಿದ ಆನೆಯು, ರಾಮಣ್ಣ ಗೌಡ, ಸೋಮನಾಥ ಗೌಡ, ಲೋಕೇಶಗೌಡ, ಎಂ.ಟಿ.ಯತೀಶ್ ಅವರ ತೆಂಗು, ಬಾಳೆ, ಭತ್ತದ ಬೆಳೆ‌ಯನ್ನು ಧ್ವಂಸ ಮಾಡಿವೆ.


ರಾಮಣ್ಣಗೌಡ ಅವರ ಭತ್ತದ ಗದ್ದೆಯಲ್ಲಿ ಓಡಾಡಿರುವ ಆನೆಗಳು ಸಸಿಗಳನ್ನು ತುಳಿದು ಧ್ವಂಸಗೊಳಿಸಿವೆ. ಫಲಭರಿತ 8 ತೆಂಗಿನ ಮರಗಳನ್ನು ಉರುಳಿಸಿವೆ. ತೋಟದಲ್ಲಿದ್ದ ಬಾಳೆಗಿಡಗಳನ್ನೂ ಸಂಪೂರ್ಣವಾಗಿ ಧ್ವಂಸಗೊಳಿಸಿವೆ.
ಲೋಕೇಶ್ ಗೌಡ ಅವರ ಎರಡು ತೆಂಗಿನ ಮರ, ಬಾಳೆಗಿಡ, ಸೋಮನಾಥಗೌಡ ಅವರ ಬಾಳೆಗಿಡ, ಯತೀಶ್ ಅವರ ಬಾಳೆತೋಟ ಸಂಪೂರ್ಣವಾಗಿ ನಾಶವಾಗಿವೆ.


ಕೆಲ ದಿನಗಳ ಹಿಂದೆ ದಾಳಿ ಮಾಡಿದ್ದ ಆನೆ, ಮತ್ರಡ್ಕ ಕೃಷ್ಣಪ್ಪ ಗೌಡ, ಮಾಕಳ ಶ್ರೀನಿವಾಸ ಗೌಡ ಅವರ ಫಲಭರಿತ ಬಾಳೆ ತೋಟವನ್ನು ಧ್ವಂಸಗೊಳಿಸಿತ್ತು.
ಈ ಭಾಗದಲ್ಲಿ ಆನೆ ದಾಳಿ ಹೆಚ್ಚಾಗಿದ್ದು, ಬೆಳೆ ಹಾನಿಯಿಂದ ರೈತರು ಕಂಗೆಟ್ಟಿದ್ದಾರೆ. ಮರಿಯೊಂದಿಗಿರುವ ಆನೆಯು ಮತ್ತೆ‌ದಾಳಿ ಮಾಡುವ ಸಾಧ್ಯತೆ ಇದ್ದು, ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರೈತರು ಮನವಿ ಮಾಡಿದ್ದಾರೆ.

Related posts

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

Suddi Udaya

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya
error: Content is protected !!