24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

ಚಿಬಿದ್ರೆ : ಚಿಬಿದ್ರೆ ಗ್ರಾಮದ ಪೆರಿಯಡ್ಕ ಸಮೀಪದ ಮಾಕಳ ಎಂಬಲ್ಲಿ ಆನೆ ದಾಳಿ ಮಾಡಿ ಬೆಳೆ ಹಾನಿ ಮಾಡಿದೆ.
ಸೆ.7ರಂದು ತಡರಾತ್ರಿ ಮರಿಯೊಂದಿಗೆ ದಾಳಿ ಮಾಡಿದ ಆನೆಯು, ರಾಮಣ್ಣ ಗೌಡ, ಸೋಮನಾಥ ಗೌಡ, ಲೋಕೇಶಗೌಡ, ಎಂ.ಟಿ.ಯತೀಶ್ ಅವರ ತೆಂಗು, ಬಾಳೆ, ಭತ್ತದ ಬೆಳೆ‌ಯನ್ನು ಧ್ವಂಸ ಮಾಡಿವೆ.


ರಾಮಣ್ಣಗೌಡ ಅವರ ಭತ್ತದ ಗದ್ದೆಯಲ್ಲಿ ಓಡಾಡಿರುವ ಆನೆಗಳು ಸಸಿಗಳನ್ನು ತುಳಿದು ಧ್ವಂಸಗೊಳಿಸಿವೆ. ಫಲಭರಿತ 8 ತೆಂಗಿನ ಮರಗಳನ್ನು ಉರುಳಿಸಿವೆ. ತೋಟದಲ್ಲಿದ್ದ ಬಾಳೆಗಿಡಗಳನ್ನೂ ಸಂಪೂರ್ಣವಾಗಿ ಧ್ವಂಸಗೊಳಿಸಿವೆ.
ಲೋಕೇಶ್ ಗೌಡ ಅವರ ಎರಡು ತೆಂಗಿನ ಮರ, ಬಾಳೆಗಿಡ, ಸೋಮನಾಥಗೌಡ ಅವರ ಬಾಳೆಗಿಡ, ಯತೀಶ್ ಅವರ ಬಾಳೆತೋಟ ಸಂಪೂರ್ಣವಾಗಿ ನಾಶವಾಗಿವೆ.


ಕೆಲ ದಿನಗಳ ಹಿಂದೆ ದಾಳಿ ಮಾಡಿದ್ದ ಆನೆ, ಮತ್ರಡ್ಕ ಕೃಷ್ಣಪ್ಪ ಗೌಡ, ಮಾಕಳ ಶ್ರೀನಿವಾಸ ಗೌಡ ಅವರ ಫಲಭರಿತ ಬಾಳೆ ತೋಟವನ್ನು ಧ್ವಂಸಗೊಳಿಸಿತ್ತು.
ಈ ಭಾಗದಲ್ಲಿ ಆನೆ ದಾಳಿ ಹೆಚ್ಚಾಗಿದ್ದು, ಬೆಳೆ ಹಾನಿಯಿಂದ ರೈತರು ಕಂಗೆಟ್ಟಿದ್ದಾರೆ. ಮರಿಯೊಂದಿಗಿರುವ ಆನೆಯು ಮತ್ತೆ‌ದಾಳಿ ಮಾಡುವ ಸಾಧ್ಯತೆ ಇದ್ದು, ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರೈತರು ಮನವಿ ಮಾಡಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya

ವಾಣಿ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವೀಕ್ಷಾ ಜೆ.ಪಿಗೆ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya
error: Content is protected !!