25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಮುಂಡೂರುನಲ್ಲಿ 10ನೇ ವರ್ಷದ ಶ್ರೀ ಗಣೇಶೋತ್ಸವವು ಶ್ರೀ ಕ್ಷೇತ್ರದ ಉದ್ಭವ ಮಹಾಗಣಪತಿಯ ಸನ್ನಿಧಾನದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಡಳಿತ ಮೊಕ್ತೇಸರ ರಾಜೀವ್ ಅವರ ನೇತೃತ್ವದಲ್ಲಿ ವೈಭವ ಪೂರ್ಣವಾಗಿ ಜರುಗಿತು.


ಸೆ.7ರಂದು ಬೆಳಿಗ್ಗೆ ಶ್ರೀ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ, ಮಹಾಗಣಪತಿ ದೇವರಿಗೆ ಗಣಹೋಮ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ

ಮೊದಲಾದ ಕಾರ್ಯಕ್ರಮಗಳು ನಡೆಯಿತು. ಶ್ರೀ ನಾಗಾಂಬಿಕಾ ಭಜನಾ ಮಂಡಳಿ ಶ್ರೀ ಕ್ಷೇತ್ರ ಮಂಗಳಗಿರಿ ಇವರಿಂದ ಕುಣಿತ ಭಜನೆ, ಶ್ರೀ ದೇವಿ ನಾಗಾಂಬಿಕಾ ಅಮ್ಮನವರಿಗೆ ಮಹಾಪೂಜೆ ನಡೆಯಿತು.

ಮಹಾಗಣಪತಿ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ , ಗಣಪತಿ ದೇವರ ವಿಗ್ರಹ ಜಲಸ್ತಂಭನ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.

ದೇವಸ್ಥಾನದ ಆಡಳಿತ ಮೊಕ್ತೇಸರ ರಾಜೀವ್, ಶ್ರೀ ನಾಗಂಬಿಕಾ ಭಜನಾ ಮಂಡಳಿಯ ಅಧ್ಯಕ್ಷ ಸಂತೋಷ್ ಕುಮಾರ್, ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ, ಕಾರ್ಯದರ್ಶಿ ಜಯರಾಜ್, ಜೊತೆ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ, ಹಾಗೂ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮಂಗಳಗಿರಿ ಸ್ವಸಹಾಯ ತಂಡದವರು ಪೂರ್ಣ ಸಹಕಾರ ನೀಡಿದರು.

ಕಾರ್ಯಕ್ರಮದಲ್ಲಿ ಊರ ಹಾಗೂ ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ನಿಧನ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya
error: Content is protected !!