ಬೆಳ್ತಂಗಡಿ : ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯಾ ಕರಾಟೆ ಮಂಗಳೂರು ಡೋಜೋ ಸೆ.6ರಂದು ಮಂಗಳೂರು ಕುಲಶೇಖರ ಕಾರ್ಡೆಲ್ ಚರ್ಚ್ ಗ್ರೌಂಡ್ ನಲ್ಲಿ ಆಯೋಜಿಸಿದ ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಷಿಪ್-2024ರಲ್ಲಿ ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ರವರು ಕಟಾದ ವಿಭಾಗದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿದ್ದಾರೆ.
ಅವರಿಗೆ ಶಿಹಾನ್ ಅಬ್ದುಲ್ ರಹಮಾನ್ ತರಬೇತಿ ನೀಡಿದ್ದರು. ಅವರು ಉಜಿರೆಯ ಬರಮೇಲು ನಿವಾಸಿ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು ಮತ್ತು ಶ್ರೀಮತಿ ಯಾಧವಿ ದಂಪತಿಯ ಪುತ್ರ.
ಸಮಾರಂಭದಲ್ಲಿ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಅಧ್ಯಕ್ಷ ಈಶ್ವರ ಕಟೀಲ್ ಮತ್ತು ಅತಿಥಿಗಳು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.













