23.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೊಯ್ಯೂರು:- ಇಲ್ಲಿಯ ಆದೂರು ಪೇರಾಲಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.
ಬೆಳಿಗ್ಗೆ ನಂದಾದೀಪ ಬೆಳಗಿಸಿ ಗಣೇಶನ ವಿಗ್ರಹ ಪ್ರತಿಷ್ಠಾಪನೆ ಗಣಹೋಮ ಬೆಳಗಿನ ಪೂಜೆ ನಂತರ ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಲ್ ಇಲ್ಲಿಯ ಮಹಿಳಾ ಮತ್ತು ಮಕ್ಕಳ ತಂಡಗಳ, ಶ್ರೀರಾಮ ಭಜನಾ ಮಂಡಳಿ ಮಲೆಬೆಟ್ಟು, ಶ್ರೀ ಪಂಚದುರ್ಗ ಭಜನಾ ಮಂಡಳಿ ಕೊಯ್ಯೂರು ದೇವಸ್ಥಾನ ಇಲ್ಲಿಯ ಭಜನಾ ತಂಡಗಳಿಂದ ಬೆಳಿಗ್ಗೆ 9:00 ಗಂಟೆ ಯಿಂದ ಮಧ್ಯಾಹ್ನ 12 ಗಂಟೆಯ ತನಕ ವಿಶೇಷ ಭಜನಾ ಕಾರ್ಯಕ್ರಮ, ಮಧ್ಯಾಹ್ನ ದೇವರಿಗೆ ಮಹಾಪೂಜೆ ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.
ಸಂಜೆ 4 ಗಂಟೆಯ ಹೊತ್ತಿಗೆ ಆದೂರು ಪೇರಾಲಿನಿಂದ ಬೈಪಾಡಿಯ ರಾಜಭೀದಿಯಲ್ಲಿ ಪುತ್ತಿಲದ ಹೊಳೆಯ ತನಕ ಆಹ್ವಾನಿತ ಭಜನಾ ತಂಡಗಳಿಂದ ಕುಣಿತ ಭಜನೆ, ನಾಸಿಕ್ ಬ್ಯಾಂಡ್ ಹಾಗೂ ಭಾರತ ಮಾತೆಯ ಮತ್ತು ವಿವಿಧ ವೇಷ ಭೂಷಣಗಳೊಂದಿಗೆ ಗಣೇಶನ ವಿಗ್ರಹದ ಜಲಸ್ತಂಭದ ಶೋಭ ಯಾತ್ರೆ ನಡೆದು ಕೊನೆಗೆ ವಿಗ್ರಹ ವಿಸರ್ಜನೆ ಮಾಡಲಾಯಿತು.
ಈ ಯಾತ್ರೆಯ ಸಂದರ್ಭ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಹಾಗೂ ಶ್ರೀ ಕೃಷ್ಣ ಭಜನಾ ಮಂಡಳಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರುಗಳು ಮತ್ತು ಊರವರು ಬಹು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನ ನೂತನ ಮೂರ್ತಿ ಮೆರವಣಿಗೆ,ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರೆವಣಿಗೆ- ತೋರಣ ಮುಹೂರ್ತ, ಭಜನಾ ಕಾರ್ಯಕ್ರಮಕ್ಕೆ ಚಾಲನೆ-ಸಹಸ್ರಾರು ಭಕ್ತರು ಭಾಗಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!