September 6, 2026
ಧಾರ್ಮಿಕ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೊಯ್ಯೂರು:- ಇಲ್ಲಿಯ ಆದೂರು ಪೇರಾಲಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.
ಬೆಳಿಗ್ಗೆ ನಂದಾದೀಪ ಬೆಳಗಿಸಿ ಗಣೇಶನ ವಿಗ್ರಹ ಪ್ರತಿಷ್ಠಾಪನೆ ಗಣಹೋಮ ಬೆಳಗಿನ ಪೂಜೆ ನಂತರ ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಲ್ ಇಲ್ಲಿಯ ಮಹಿಳಾ ಮತ್ತು ಮಕ್ಕಳ ತಂಡಗಳ, ಶ್ರೀರಾಮ ಭಜನಾ ಮಂಡಳಿ ಮಲೆಬೆಟ್ಟು, ಶ್ರೀ ಪಂಚದುರ್ಗ ಭಜನಾ ಮಂಡಳಿ ಕೊಯ್ಯೂರು ದೇವಸ್ಥಾನ ಇಲ್ಲಿಯ ಭಜನಾ ತಂಡಗಳಿಂದ ಬೆಳಿಗ್ಗೆ 9:00 ಗಂಟೆ ಯಿಂದ ಮಧ್ಯಾಹ್ನ 12 ಗಂಟೆಯ ತನಕ ವಿಶೇಷ ಭಜನಾ ಕಾರ್ಯಕ್ರಮ, ಮಧ್ಯಾಹ್ನ ದೇವರಿಗೆ ಮಹಾಪೂಜೆ ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.
ಸಂಜೆ 4 ಗಂಟೆಯ ಹೊತ್ತಿಗೆ ಆದೂರು ಪೇರಾಲಿನಿಂದ ಬೈಪಾಡಿಯ ರಾಜಭೀದಿಯಲ್ಲಿ ಪುತ್ತಿಲದ ಹೊಳೆಯ ತನಕ ಆಹ್ವಾನಿತ ಭಜನಾ ತಂಡಗಳಿಂದ ಕುಣಿತ ಭಜನೆ, ನಾಸಿಕ್ ಬ್ಯಾಂಡ್ ಹಾಗೂ ಭಾರತ ಮಾತೆಯ ಮತ್ತು ವಿವಿಧ ವೇಷ ಭೂಷಣಗಳೊಂದಿಗೆ ಗಣೇಶನ ವಿಗ್ರಹದ ಜಲಸ್ತಂಭದ ಶೋಭ ಯಾತ್ರೆ ನಡೆದು ಕೊನೆಗೆ ವಿಗ್ರಹ ವಿಸರ್ಜನೆ ಮಾಡಲಾಯಿತು.
ಈ ಯಾತ್ರೆಯ ಸಂದರ್ಭ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಹಾಗೂ ಶ್ರೀ ಕೃಷ್ಣ ಭಜನಾ ಮಂಡಳಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರುಗಳು ಮತ್ತು ಊರವರು ಬಹು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಥಾಮಸ್ ಕಪ್ ವಿಜೇತ ಹಾಗೂ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಸತ್ಕರ್ಮದ ಫಲಗಳು ಶಾಶ್ವತ …ಮಾಣಿಲ ಶ್ರೀ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರಿಗೆ ಪೂರ್ಣ ಕುಂಭ ಭವ್ಯ ಸ್ವಾಗತ

Suddi Udaya
error: Content is protected !!