ಸುಲ್ಕೇರಿಮೊಗ್ರು: ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿ ಮೊಗ್ರು ಇದರ ವತಿಯಿಂದ ಸುಲ್ಕೇರಿಮೊಗ್ರುವಿಂದ ಅಳದಂಗಡಿವರೆಗೆ ರಸ್ತೆ ಬದಿಯಲ್ಲಿ ಬೆಳೆದಿರುವ ಪೊದೆ ಗಿಡಗಳನ್ನು ಕಡಿದು ಸ್ವಚ್ಛ ಮಾಡಿದರು.

ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಪಟ್ಲ ಗುರುವಪ್ಪ ಪೂಜಾರಿ ಯವರು ನೀಡಿದರು.
ಶ್ರಮದಾನದಲ್ಲಿ ಅಧ್ಯಕ್ಷರು, ಕಾರ್ಯದರ್ಶಿಯವರ ಜೊತೆ ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆಯ ಸದಸ್ಯರು ಭಾಗವಹಿಸಿ ಸಹಕರಿಸಿದರು.













