28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

ಬೆಳ್ತಂಗಡಿ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವವು ಬಹಳ ವಿಜೃಂಭಣೆಯಿಂದ ನೆರವೇರಿತು.

ಶಾಲಾ ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ ಗಣೇಶೋತ್ಸವನ್ನುದ್ದೇಶಿಸಿ ವಸತಿ ಶಾಲೆಯ ಮಕ್ಕಳು ಮತ್ತು ಶಾಲೆಯ ಸಿಬ್ಬಂದಿ ರಾಧಾಕೃಷ್ಣ ಇವರು ಈ ಬಾರಿ ಪರಿಸರ ಸ್ನೇಹಿ ತರಕಾರಿ ಗಣೇಶನ ಸುಂದರವಾದ ಮೂರ್ತಿಯನ್ನು ನಿರ್ಮಿಸಿದ್ದಾರೆ. ವಸತಿ ಶಾಲೆಯಲ್ಲಿ ಹೊರ ಜಿಲ್ಲೆಯ ಮಕ್ಕಳಿಗೆ ಕೂಡ ಹಬ್ಬದ ಮಹತ್ವ ತಿಳಿಯಲಿ ಮತ್ತು ಎಲ್ಲಾ ಮಕ್ಕಳು ಕೂಡ ಸಂತೋಷದಿಂದ ಭಾಗವಹಿಸಿ ಸಂಭ್ರಮಿಸಲಿ ಎಂಬ ದೃಷ್ಟಿಯಿಂದ ಈ ಗಣೇಶೋತ್ಸವನ್ನು ಆಚರಿಸುತ್ತಿದ್ದೇವೆ ಎಂದು ಹೇಳಿದರು .

ಗಣೇಶೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ಕುಣಿತ ಭಜನೆ, ಭಕ್ತಿ ಪ್ರಧಾನ ನೃತ್ಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಸ್ಥಳೀಯ ಶಾಲೆಯ ಹಿತೈಷಿಗಳಾದ ಸೀತಾರಾಮ ರೈ ಆಗಮಿಸಿ ಮಕ್ಕಳಿಗೆ ಶುಭ ಹಾರೈಸಿದರು. ಪ್ರತೀಶ್ ಪೆರಿಂಜೆ ಎಲ್ಲರಿಗೂ ಸಿಹಿ ತಿಂಡಿ ನೀಡಿ ಸಹಕರಿಸಿದರು. ರಾಜ್ಯ ಮಟ್ಟದ ಕಬಡ್ಡಿ ತರಬೇತುದಾರ ಜಯಂತ್ ಶೆಟ್ಟಿ ಹಕ್ಕೇರಿ, ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ, ಶಾಲೆಯ ಅಡುಗೆ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗಣೇಶನ ಮೂರ್ತಿಯ ಜಲಸ್ತಂಭನದೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.

Related posts

ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬಳಂಜ ಸಂಘದಿಂದ ಶ್ರೀ ರಾಮತಾರಕ ಮಂತ್ರ

Suddi Udaya

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya
error: Content is protected !!