May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

ಬೆಳ್ತಂಗಡಿ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವವು ಬಹಳ ವಿಜೃಂಭಣೆಯಿಂದ ನೆರವೇರಿತು.

ಶಾಲಾ ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ ಗಣೇಶೋತ್ಸವನ್ನುದ್ದೇಶಿಸಿ ವಸತಿ ಶಾಲೆಯ ಮಕ್ಕಳು ಮತ್ತು ಶಾಲೆಯ ಸಿಬ್ಬಂದಿ ರಾಧಾಕೃಷ್ಣ ಇವರು ಈ ಬಾರಿ ಪರಿಸರ ಸ್ನೇಹಿ ತರಕಾರಿ ಗಣೇಶನ ಸುಂದರವಾದ ಮೂರ್ತಿಯನ್ನು ನಿರ್ಮಿಸಿದ್ದಾರೆ. ವಸತಿ ಶಾಲೆಯಲ್ಲಿ ಹೊರ ಜಿಲ್ಲೆಯ ಮಕ್ಕಳಿಗೆ ಕೂಡ ಹಬ್ಬದ ಮಹತ್ವ ತಿಳಿಯಲಿ ಮತ್ತು ಎಲ್ಲಾ ಮಕ್ಕಳು ಕೂಡ ಸಂತೋಷದಿಂದ ಭಾಗವಹಿಸಿ ಸಂಭ್ರಮಿಸಲಿ ಎಂಬ ದೃಷ್ಟಿಯಿಂದ ಈ ಗಣೇಶೋತ್ಸವನ್ನು ಆಚರಿಸುತ್ತಿದ್ದೇವೆ ಎಂದು ಹೇಳಿದರು .

ಗಣೇಶೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ಕುಣಿತ ಭಜನೆ, ಭಕ್ತಿ ಪ್ರಧಾನ ನೃತ್ಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಸ್ಥಳೀಯ ಶಾಲೆಯ ಹಿತೈಷಿಗಳಾದ ಸೀತಾರಾಮ ರೈ ಆಗಮಿಸಿ ಮಕ್ಕಳಿಗೆ ಶುಭ ಹಾರೈಸಿದರು. ಪ್ರತೀಶ್ ಪೆರಿಂಜೆ ಎಲ್ಲರಿಗೂ ಸಿಹಿ ತಿಂಡಿ ನೀಡಿ ಸಹಕರಿಸಿದರು. ರಾಜ್ಯ ಮಟ್ಟದ ಕಬಡ್ಡಿ ತರಬೇತುದಾರ ಜಯಂತ್ ಶೆಟ್ಟಿ ಹಕ್ಕೇರಿ, ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ, ಶಾಲೆಯ ಅಡುಗೆ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗಣೇಶನ ಮೂರ್ತಿಯ ಜಲಸ್ತಂಭನದೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.

Related posts

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya
error: Content is protected !!